ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪ್ರೊ. ಐ.ವಿ. ರಾವ್ ರವರು ಜೂನ್ 9 ರಂದು ನಿಧನರಾಗಿದ್ದು, ಅವರಿಗೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ನುಡಿನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹಾಗೂ ಕ್ಸೇವಿಯರ್ ಬ್ಲಾಕಿನ ನಿರ್ದೇಶಕ ಡಾ. ಈಶ್ವರ ಭಟ್ ರವರು ಮಾತನಾಡಿ ಪ್ರೊ. ಐ.ವಿ. ರಾವ್ ರವರ ಸೇವಾ ದಿನಗಳನ್ನು ನೆನಪಿಸಿಕೊಂಡು ಹಲವಾರು ಪುಸ್ತಕಗಳನ್ನು ಬರೆದು ವಿಭಾಗಕ್ಕೆ ಮತ್ತು ವಿದ್ಯಾರ್ಥಿ ಸಮುದಾಯಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಅವರ ನಿಸ್ವಾರ್ಥ ಸೇವಾ ಮನೋಭಾವ ವಿದ್ಯಾರ್ಥಿಗಳಿಗೆ ಮತ್ತು ಸಹೋದ್ಯೋಗಿಗಳಿಗೆ ಅಚ್ಚುಮೆಚ್ಚಿನದಾಗಿತ್ತು ಎಂದರು.
ಅಲೋಶಿಯಸ್ ವಿವಿಯ ಕುಲಪತಿಗಳಾದ ವಂ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ.ರವರು ಮಾತನಾಡಿ, ತನ್ನ ವಿದ್ಯಾರ್ಥಿಜೀವನದಲ್ಲಿ ಪ್ರೊ. ಐ.ವಿ. ರಾವ್ ರವರು ಕಲಿಸಿದ ಪಾಠಗಳನ್ನು ನೆನಪಿಸಿಕೊಂಡು, ಶ್ರದ್ಧಾಂಜಲಿ ಸಲ್ಲಿಸಿದರು.
ಅಲೋಶಿಯಸ್ ವಿವಿಯ ಶಿಕ್ಷಕರ ಸಂಘದ ಅಧ್ಯಕ್ಷೆ ಡಾ. ರೋಸ್ ವೀರಾ ಡಿಸೋಜರವರು ಮಾತನಾಡಿ, ಪ್ರೊ. ಐ.ವಿ. ರಾವ್ ರವರ ಸರಳತೆ ಮತ್ತು ಒಡನಾಟವನ್ನು ನೆನಪಿಸಿಕೊಂಡು, ಅವರ ಆದರ್ಶ ಜೀವನವನ್ನು ಮೈಗೂಡಿಸಿಕೊಳ್ಳುವಂತೆ ತಿಳಿಸಿದರು.
ಭೌತಶಾಸ್ತ್ರ ವಿಭಾಗದ ಅಧ್ಯಾಪಕರು ಮತ್ತು ವಿವಿಯ ಎಲ್ಲಾ ಶಿಕ್ಷಕ ಸಿಬ್ಬಂದಿಯವರು ಸಭೆಯಲ್ಲಿ ಪಾಲ್ಗೊಂಡು ಪ್ರೊ. ಐ.ವಿ. ರಾವ್ ರವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ