ಉಡುಪಿ: ಶ್ರೀ ಕೃಷ್ಣ ಮಂಡಲೋತ್ಸವದ ಪ್ರಥಮ ಚಿಂತನಾ ಸಭೆ

Upayuktha
0


ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠದ ವತಿಯಿಂದ ಶ್ರೀ ಕೃಷ್ಣ ಮಠದಲ್ಲಿ ಮುಂಬರುವ ಕೃಷ್ಣ ಜನ್ಮಾಷ್ಟಮಿಯನ್ನು ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ  ಆಯೋಜನೆಯೊಂದಿಗೆ ವೈಶಿಷ್ಟ್ಯ ಪೂರ್ಣವಾಗಿ ನಡೆಸುವ ಬಗ್ಗೆ ಪ್ರಥಮ ಚಿಂತನಾ ಸಭೆ ಸೋಮವಾರ ಶ್ರೀಕೃಷ್ಣ ಮಠದ ಕನಕ ಮಂಟಪದಲ್ಲಿ ನಡೆಯಿತು.


ಆಗಸ್ಟ್ 1 ರಿಂದ ಮೊದಲ್ಗೊಂಡು ಸೆಪ್ಟೆಂಬರ್ 17 ರವರೆಗೆ ಈ ಮಂಡಲೋತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಚಾ೦ದ್ರ ಕೃಷ್ಣ ಜನ್ಮಾಷ್ಟಮಿ ಆಗಸ್ಟ್ 15, 16 ಮತ್ತು ಸೌರ ಶ್ರೀ ಕೃಷ್ಣ ಜನ್ಮಾಷ್ಟಮಿ ಸೆಪ್ಟೆಂಬರ್ 14, 15 ರಂದು ನಡೆಯಲಿದೆ.


ಉಡುಪಿಯಲ್ಲಿ ಸೌರ ಮಾನ ಪದ್ಧತಿ ಆಚರಣೆಯಲ್ಲಿರುವುದು. ಈ ಎರಡೂ ಉತ್ಸವಗಳನ್ನು ವೈಭವದಿಂದ ಆಚರಿಸಲು ಚರ್ಚಿಸಲಾಯಿತು. ಸ್ವಾಗತ ಸಮಿತಿಯ ಅನೇಕ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಂಡು ಸಹಕರಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top