ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆಂಧ್ರಪ್ರದೇಶದ ಕಡಪಾದ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷರಾದ ಸ್ವಾಮಿ ಅನುಪಮಾನಂದಜೀ ಅವರು ವಿವೇಕಾನಂದರ ಶಿಕ್ಷಣ ತತ್ವಗಳು ಮತ್ತು ಇಂದಿನ ಶಿಕ್ಷಣ ವ್ಯವಸ್ಥೆಯ ಬಗ್ಗೆ ಮಾತನಾಡಿದರು.
ಸ್ವಾಮಿ ವಿವೇಕಾನಂದರು ನಮಗೆ ಆದರ್ಶ ವ್ಯಕ್ತಿ. ಅವರ ವಿಚಾರಧಾರೆ, ಚಿಂತನೆ ಮತ್ತು ಬದುಕಿನ ಹಾದಿ ನಮಗೆ ಸ್ಫೂರ್ತಿ. ಆದುದರಿಂದ ವೈಚಾರಿಕ ಸ್ವಾವಲಂಬನೆ ನೀಡುವುದೇ ಶಿಕ್ಷಣವಾಗಿದೆ. ಶಿಕ್ಷಣವು ದೇಶಾಭಿಮಾನ ಬೆಳೆಸುವುದರೊಂದಿಗೆ ಸರ್ವ ಸಮಸ್ಯೆಗೆ ಔಷಧಿಯಾಗಿದ್ದು ಸರ್ವತೋಮುಖ ಬೆಳವಣಿಗೆಗೆ ಸಾಧ್ಯವಾಗಿದೆ. ಶಿಕ್ಷಕರು ತಮ್ಮ ಶಿಕ್ಷಣ ವಿದ್ಯಾಲಯ ಮತ್ತು ಪಠ್ಯ ವಿಷಯದ ಬಗ್ಗೆ ಗೌರವವಿಟ್ಟು ಪ್ರತಿಯೊಬ್ಬ ವಿದ್ಯಾರ್ಥಿಗೂ ಮಹತ್ವ ನೀಡಿದಾಗ ವಿದ್ಯಾರ್ಥಿಯ ಬದುಕಿನ ಹಾದಿ ಸುಗಮವಾಗುತ್ತದೆ ಎಂದರು.
ಇನ್ನೋರ್ವ ಅತಿಥಿ ಕ್ಯಾಪ್ಟನ್ ಬೆಳ್ಳಾಲ ಗೋಪಿನಾಥ್ ಅವರು ಸ್ವಾಮಿ ವಿವೇಕಾನಂದರ ಬಗ್ಗೆ ಮತ್ತು ಶ್ರೀ ರಾಮಕೃಷ್ಣ ಆಶ್ರಮದ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ವಾಮಿ ಅನುಪಮಾನಂದಜೀಯವರನ್ನು ಗೌರವಿಸಲಾಯಿತು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್, ಬಿ.ಎಡ್. ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ಡಾನ, ಶ್ರೀ. ಧ. ಮಂ. ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುನಿಲ್ ಪಂಡಿತ್ ರವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕ ವೃಂದ ಮತ್ತು ಪ್ರಥಮ ಹಾಗೂ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳು ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಇತರ ಅಂಗಸಂಸ್ಥೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸಾಯಿಧೃತಿ ಸ್ವಾಮಿ ಅನುಪಮಾನಂದಜೀ ಯವರನ್ನು ಪರಿಚಯಿಸಿ, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ತೇಜಸ್ವಿನಿ ಕಾಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ