ವಿವೇಕಾನಂದ ಪಿಯು ಕಾಲೇಜು ಪ್ರಾರಂಭೋತ್ಸವ, ಸರಸ್ವತಿ ಪೂಜೆ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ  ವೈದೇಹಿ ಸಭಾಂಗಣದಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಶೆಕೋಡಿ ಸೂರ್ಯನಾರಾಯಣ ಭಟ್‌ ಅವರ ನೇತೃತ್ವದಲ್ಲಿ ಅರುಣ್‌ ಹಾಗೂ ಪ್ರದೀಪ್ ಇವರು ಸರಸ್ವತಿ ಪೂಜೆಯನ್ನು ನೆರವೇರಿಸಿದರು.  ಈ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.  


ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ನಿರ್ದೇಶಕರಾದ ವತ್ಸಲಾ ರಾಜ್ಞಿ ,  ಡಾ. ಕೃಷ್ಣಪ್ರಸನ್ನ .ಕೆ, ಕೋಶಾಧಿಕಾರಿಗಳಾದ ಸಚಿನ್‌ ಶೆಣೈ, ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್‌,   ಪ್ರಾಂಶುಪಾಲರಾದ ಎಮ್. ದೇವಿಚರಣ್‌ ರೈ , ಉಪನ್ಯಾಸಕ, ಉಪನ್ಯಾಸಕೇತರ ವೃಂದ, ಪ್ರಥಮ ಪಿಯುಸಿ ವಿದ್ಯಾರ್ಥಿಗಳು  ಹಾಗೂ ಪೋಷಕರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top