ಕುಂಬಳೆ: ಮುಜುಂಗಾವು ಶ್ರೀ ಭಾರತಿ ವಿದ್ಯಾಪೀಠದಲ್ಲಿ ಯೋಗ ದಿನಾಚರಣೆಯನ್ನು ಪ್ರಾಣಾಯಾಮ, ಯೋಗಾಸನ ಪ್ರದರ್ಶನದ ಮೂಲಕ ನಡೆಸಲಾಯಿತು.
ಯೋಗದಿಂದ ರೋಗ ದೂರ. ಯಾವುದೇ ಭಂಗಿಯಲ್ಲಿ ನಾವಿದ್ದರೂ ಅಲ್ಲಿ ಸ್ಥಿರತೆ ಇದ್ದರೆ ಮಾತ್ರ ಅದನ್ನು ಆಸನ ಎಂದು ಹೇಳಬಹುದು. ಉಸಿರಾಟವು ಸಮತೋಲನದಲ್ಲಿರಲು ಪ್ರಾಣಾಯಾಮ ಅತಿ ಅಗತ್ಯ, ವಿದ್ಯಾರ್ಥಿಗಳ ಏಕಾಗ್ರತೆಗೆ ಯೋಗವು ಅತ್ಯಂತ ಸಹಕಾರಿ ಎಂದು ಅತಿಥಿಗಳಾಗಿ ಆಗಮಿಸಿದ ಶ್ರೀ ಶಂಕರನಾರಾಯಣ ಭಟ್ ಹೊಸಮನೆ ಇವರು ಮಕ್ಕಳನ್ನು ಉದ್ದೇಶಿಸಿ ಕಿವಿಮಾತು ಹೇಳಿದರು.
ಶಾಲಾ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಬೆಜಪ್ಪೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಎಚ್.ಎಸ್ ಪ್ರಸಾದ್, ಶಾಲಾ ಮುಖ್ಯೋಪಾಧ್ಯಾಯ ಶ್ಯಾಮ್ ಭಟ್ ದರ್ಭೆ ಮಾರ್ಗ, ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಉಪಸ್ಥಿತರಿದ್ದರು.
ಯೋಗ ಅಧ್ಯಾಪಿಕೆ ಡಾ.ಸ್ನೇಹ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಅಧ್ಯಾಪಿಕೆ ಶ್ರೀಮತಿ ವಿದ್ಯಾಲಕ್ಷ್ಮಿ ಕಾರ್ಯಕ್ರಮ ನಡೆಸಿಕೊಟ್ಟರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ