ದಾವಣಗೆರೆ: ಭಾರತೀಯ ಸನಾತನ ಪರಂಪರೆಯಲ್ಲಿ ಒಂದಾದ ಯೋಗ ಶಾಸ್ತ್ರ ಕೇವಲ ಪ್ರದರ್ಶನಕ್ಕೆ ಸೀಮಿತವಾಗದೇ ನಿತ್ಯಾನುಷ್ಠಾನದ ಕಲೆಯಾಗಬೇಕು. ಆಗ ಮಾತ್ರ ನಾವು ನೀವೆಲ್ಲಾ ಯೋಗದ ಪರಿಪೂರ್ಣತೆಯಲ್ಲಿ ಸದ್ಭಳಕೆ ಮಾಡಿಕೊಳ್ಳಬೇಕು. ಯೋಗ ಪಿತಾಮಹ ಪತಂಜಲಿ ಮಹರ್ಷಿಯವರು ಮಾನವನ ಜೀವನಕ್ಕೆ ಯೋಗಸಾಧನೆಯ ತುತ್ತತುದಿಯಲ್ಲಿ ತಲುಪಲು ಮೋಕ್ಷ ಸಾಧನೆಗಾಗಿ ಅಷ್ಟಾಂಗ ಯೋಗವನ್ನು ಕಲಿಯುವ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿಯನ್ನು ಅಂತರಾಷ್ಟೀಯ ಯೋಗ ಪ್ರಶಸ್ತಿ ಪುರಸ್ಕೃತರಾದ ಯೋಗ ತಜ್ಞರಾದ ಡಾ. ರಾಘವೇಂದ್ರ ಗುರೂಜಿ ತಮ್ಮ ಅಂತರಾಳದ ಭಾವನೆಗಳನ್ನು ವ್ಯಕ್ತಪಡಿಸಿದರು.
ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಉಚಿತ ಯೋಗ ಶಿಬಿರವನ್ನು ತುಳಸಿ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ಶೆಣೈಯವರು ಮಾತನಾಡಿ, ಯೋಗ, ಧ್ಯಾನ, ಸಾಮಾಜಿಕ ಕಾಳಜಿಯ, ಸಾಂಸ್ಕೃತಿಕ, ಧಾರ್ಮಿಕ ಚಟುವಟಿಕೆಗಳು ಮಾನವನ ಜೀವನದ ಸದ್ಭಳಕೆ ಕೇವಲ ಹೊಟ್ಟೆ ಪಾಡಿಗೆ ಸೀಮಿತವಾಗದೇ ಈ ಚಟುವಟಿಕೆಗಳಿಂದ ನಮ್ಮ ನಿಮ್ಮೆಲ್ಲರ ಜೀವನಕ್ಕೆ ಸಾರ್ಥಕತೆ ಬರುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಡಾ|| ಮಂಗಳಾ ಶೇಖರ್ ಮಾತನಾಡಿ, ನಾಟ್ಯ, ಯೋಗ ಒಂದು ನಾಣ್ಯದ ಎರಡು ಮುಖಗಳು. ನಾಟ್ಯ ಪರಂಪರೆಯೂ ಯೋಗ ಧ್ಯಾನಕ್ಕೆ ಪೂರಕ ಎಂದರು.
ಯೋಗ ಶಿಕ್ಷಕಿ ಸಂಧ್ಯಾ ಶ್ರೀನಿವಾಸ್, ವಿದ್ಯಾನಗರ ಶಾಖೆಯ ಅಧ್ಯಕ್ಷರಾದ ರಾಜಶೇಖರ ಬೆನ್ನೂರು, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ ಮುಂತಾದವರು ವೇದಿಕೆಯಲ್ಲಿ ಗೌರವ ಉಪಸ್ಥಿತರಿದ್ದರು. ಯೋಗ ಸಾಧನೆಯ ಡಾ. ರಾಘವೇಂದ್ರ ಗುರೂಜಿ, ಆಯುರ್ವೇದ ವೈದ್ಯರಾದ ಡಾ|| ಮಂಗಳಾ ಶೇಖರ್ ರವರಿಗೆ ಇತ್ತೀಚಿಗೆ ಪಿ.ಹೆಚ್.ಡಿ. ಡಾಕ್ಟರೇಟ್ ಪದವಿ ಬಂದಿದ್ದಕ್ಕೆ ಕಲಾಕುಂಚದಿಂದ ಸನ್ಮಾನಿಸಿ ಗೌರವಿಸಲಾಯಿತು.
ಸುಚಿತ್ರಾ ಗಣೇಶ್ರಾವ್ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಮಾರಂಭಕ್ಕೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಪ್ರಧಾನ ಕಾರ್ಯದರ್ಶಿ ಸುಮಾ ಏಕಾಂತಪ್ಪ ಸ್ವಾಗತಿಸಿದರು. ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ನಿರೂಪಿಸಿದರು. ಯಕ್ಷಗಾನ ಕಲಾವಿದೆ ಸುಧಾ ಸಂತೋಷ್ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ