ವಿಟ್ಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ-ಅಲಂಗಾರು ಒಕ್ಕೂಟದ ವಾರ್ಷಿಕೋತ್ಸವ ಚಂದಳಿಕೆಯ ದ.ಕ. ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಭಾನುವಾರ (ಜುಲೈ 13) ನಡೆಯಿತು.
ದಕ್ಷಿಣ ಕನ್ನಡ -2 ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ್ ಇವರು ಕಾರ್ಯಕ್ರಮದ ಉದ್ಘಾಟಿಸಿದರು. ಸಂಘವು ಬೆಳೆದು ಬಂದ ದಾರಿ ಸಂಘದಲ್ಲಿ ಉತ್ತಮವಾಗಿ ಗ್ರೇಡ್ ಬರಬೇಕೆಂದರೆ ಏನು ಮಾಡಬೇಕು; ಯೋಜನೆಯಲ್ಲಿ 46,000 ಕಾರ್ಯಕರ್ತರಿದ್ದು, ಬೇರೆ ಯಾವುದೇ ಸಂಸ್ಥೆಯಲ್ಲಿ ಇಷ್ಟು ಕಾರ್ಯಕರ್ತರಿಲ್ಲ. ಸ್ವಾವಲಂಬಿಯಾಗಿ ಬದುಕಲು ದಾರಿ ಮಾಡಿಕೊಟ್ಟಿದ್ದಾರೆ ನಮ್ಮ ಪೂಜ್ಯರು ಎಂದು ಅವರು ನುಡಿದರು.
ಸಂಘಕ್ಕೆ ವಿಧಿಸುವ ಬಡ್ಡಿದರದ ಬಗ್ಗೆ; ಮಾಸಾಶನ, ಸುಜ್ಞಾನ ನಿಧಿ, ಶಿಷ್ಯ ವೇತನದ ಬಗ್ಗೆ ತಿಳಿಸಿದರು. ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಪುನೀತ್ ಮಾಡತರ್ ಇವರು ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸೌಲಭ್ಯಗಳ ಬಗ್ಗೆ ತಿಳಿಸಿದರು. ಸಂಘದಿಂದ ತುಂಬಾ ಜನರಿಗೆ ಪ್ರಯೋಜನವಾಗಿದೆಯೆಂದು ತಿಳಿಸಿದರು.
10ನೆ ತರಗತಿಯಲ್ಲಿ ಅತಿ ಹೆಚ್ಚು 612 ಅಂಕ ಗಳಿಸಿದ ಕು. ಶ್ರುತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ದೀಕ್ಷಾ ಇವರನ್ನು ಗೌರವಿಸಲಾಯಿತು. ಅತ್ಯುತ್ತಮ ಪ್ರಗತಿ ಬಂಧು & ಸ್ವಸಹಾಯ ಸಂಘಗಳನ್ನು ಗುರುತಿಸಲಾಯಿತು.
ನಿವೃತ್ತ ಸೈನಿಕರಾದ ಪುರಂದರ ದರ್ಬೆ, ಅಳಿಕೆ ವಲಯದ ವಲಯಾಧ್ಯಕ್ಷ ರಾಜೇಂದ್ರ ರೈ, ವಲಯದ ಮೇಲ್ವಿಚಾರಕಿ ಹಾಗೂ ಒಕ್ಕೂಟದ ಅಧ್ಯಕ್ಷೆ ಸುಜಾತಾ, ಪದಾಧಿಕಾರಿಗಳು, ಸರ್ವ ಸದಸ್ಯರು, ಶೌರ್ಯ ವಿಪತ್ತು ಅಳಿಕೆ ಘಟಕದ ಸದಸ್ಯರು ಉಪಸ್ಥಿತರಿದ್ದರು.
ಶಬರಿ ಕುಣಿತ ಮಾಡತ್ತಡ್ಕ ಹಾಗೂ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ಅಜ್ಜಿನಡ್ಕ ಇವರಿಂದ ಕುಣಿತ ಭಜನೆ ನಡೆಯಿತು. ಅಜ್ಜಿನಡ್ಕ ಸೇವಾ ಪ್ರತಿನಿಧಿ ಕಾವ್ಯ ಹಾಗೂ ಸರಸ್ವತಿಯವರು ಸಹಕರಿಸಿದರು. ಕಾರ್ಯದರ್ಶಿ ವಿಶಾಲಾಕ್ಷಿ ವರದಿ ಮಂಡಿಸಿದರು. ಸುಮತಿಯವರು ಸ್ವಾಗತಿಸಿ, ಸೇವಾ ಪ್ರತಿನಿಧಿ ರೂಪ ಅವರು ವಂದಿಸಿದರು. ಜಯಶ್ರೀ ಕಾರ್ಯಕ್ರಮ ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ