ಜುಲೈ 10; ಗುರು ಪೌರ್ಣಿಮೆ ಅಂಗವಾಗಿ ಸಾಮೂಹಿಕ ಗಾಯತ್ರಿ ಪೂಜೆ, ಉಪಾಸನೆ

Upayuktha
0



ದಾವಣಗೆರೆ: ನಗರದ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಗಾಯತ್ರಿ ಪೂಜೆ, ಉಪಾಸನೆ, ಗುರು ಪೌರ್ಣಿಮೆ ಅಂಗವಾಗಿ ದಿನಾಂಕ 10-07-2025 ರಂದು ಗುರುವಾರ ಬೆಳಿಗ್ಗೆ 7-00ಕ್ಕೆ ನಡೆಯಲಿದೆ ಎಂದು ಗಾಯಿತ್ರಿ ಪರಿವಾರದ ಖಜಾಂಚಿ ಪುರುಷೋತ್ತಮ ಪಟೇಲ್ ತಿಳಿಸಿದ್ದಾರೆ.

 

ನಗರದ ಜಯದೇವ ವೃತ್ತದಲ್ಲಿರುವ ಶಂಕರಮಠದಲ್ಲಿ ನಡೆಯಲಿರುವ  ಈ  ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರು ಗಾಯಿತ್ರಿ ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್ ಮತ್ತು ಕುಟುಂಬದವರು ಕಳೆದ ಇಪ್ಪತೈದು ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆ ಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ  ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ  ವಿನಂತಿಸಿದ್ದಾರೆ.




Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top