ದಾವಣಗೆರೆ: ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಗಾಯತ್ರಿ ಪೂಜೆ ಉಪಾಸನೆ ಈ ತಿಂಗಳ ಗುರು ಪೌರ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಸುಸಂಪನ್ನಗೊಂಡಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ಶೆಣೈ ತಿಳಿಸಿದ್ದಾರೆ.
ಗಾಯಿತ್ರಿ ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್ರವರ ಕುಟುಂಬದ ಈ ತಿಂಗಳ ಪೂಜೆಯಲ್ಲಿ ಪರಿವಾರದ ಸಂಚಾಲಕರಾದ ಸತೀಶ್ ಆರ್.ಎಂ., ಖಜಾಂಚಿ ಪುರುಷೋತ್ತಮ ಪಟೇಲ್, ಸಮಿತಿ ಸದಸ್ಯರಾದ ಶೈಲ ವಿಜಯಕುಮಾರ್ ಶೆಟ್ಟಿ ದಂಪತಿಗಳು, ಎಂ.ಎಸ್.ಪ್ರಸಾದ್, ವೀರಭದ್ರಪ್ಪ ದಂಪತಿಗಳು, ಬಿ.ಸತ್ಯನಾರಾಯಣ ಮೂರ್ತಿ, ವಿ.ಕೃಷ್ಣಮೂರ್ತಿ, ಹರಿಸುಮಂತ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ