ಬಡವರ ಸೇವೆಯಲ್ಲಿ ವೈದ್ಯರು ದೇವರನ್ನು ಕಾಣಬೇಕು: ತಿಪ್ಪಣ್ಣಪ್ಪ ಕಮಕನೂರು

Upayuktha
0

ಹರಿದಾಸ್ ಹಾರ್ಟ್ ಆಸ್ಪತ್ರೆಗೆ ಚಾಲನೆ




ಕಲಬುರಗಿ: ವೈದ್ಯರುಗಳು ಬಡವರ ಆರೋಗ್ಯ ಸೇವೆಯನ್ನು ಮಾಡಿ ದೇವರನ್ನು ಕಾಣಬೇಕು.  ರೋಗಿಗಳಿಗೆ ವೈದ್ಯರೆ ನಡೆದಾಡುವ ದೇವರು ಎಂದು ವಿಧಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರು ಹೇಳಿದರು. 


ಕಲಬುರಗಿಯ ಜವಳಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಆರಂಭಗೊಂಡ ಹರಿದಾಸ ಹಾರ್ಟ್ ಹಾಸ್ಪಿಟಲ್ ಜುಲೈ 28ರಂದು ಉದ್ಘಾಟನೆ ಮಾಡಿ ಮಾತನಾಡಿದ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ತಜ್ಞ ವೈದ್ಯರ ಕೊರತೆಯಿಂದ ಸೋಲಾಪುರ ಬೆಂಗಳೂರಿಗೆ ರೋಗಿಗಳು ತೆರಳುತ್ತಿದ್ದ ಯುಗಕ್ಕೆ ಅಂತ್ಯ ಹಾಡಲು ತಜ್ಞ ವೈದ್ಯರು ಕಲಬುರಗಿಯಲ್ಲಿ ಆಸ್ಪತ್ರೆ ಪ್ರಾರಂಭಿಸುವುದರ ಮೂಲಕ ಈ ಭಾಗದ ಜನರ ಸೇವೆಗೆ ಮುಂದಾಗಿರುವುದು ಶ್ಲಾಘನೀಯ ವಿಷಯ ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಹೃದ್ರೋಗವು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಡಾ. ಅರುಣ್ ಕುಮಾರ್ ಹರಿದಾಸ್ ಜಗದ್ವಿಖ್ಯಾತ ವೈದ್ಯರು ಕಲಬುರಗಿಯಲ್ಲಿ ಸೇವೆಗೆ ಸಿಗುತ್ತಿರುವುದು ಈ ಭಾಗದ ದೊಡ್ಡ ಭಾಗ್ಯ. ಇಂತಹ ವೈದ್ಯರುಗಳಿಗೆ ಸರಕಾರ ಹಾಗೂ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉದ್ಯಮಿಗಳಾದ ರಾಘವೇಂದ್ರ ಮೈಲಾಪುರ ಮಾತನಾಡಿ ಕಲಬುರಗಿಯಲ್ಲಿ ಹೃದ್ರೋಗ ಆಸ್ಪತ್ರೆ ಪ್ರಾರಂಭವಾಗಿರುವುದು ಹೆಮ್ಮೆಯ ಸಂಗತಿ ಹಾಗೂ ಡಾ. ಅರುಣ್ ಕುಮಾರ್ ಹರಿದಾಸ್ ಶ್ರೇಷ್ಠ ವೈದ್ಯರಾಗಿದ್ದು ಅವರ ಸೇವೆ ಈ ಭಾಗಕ್ಕೆ ದೊಡ್ಡ ಕೊಡುಗೆ ಎಂದು ಹೇಳಿದರು. ಹರಿದಾಸ್ ಹಾರ್ಟ್ ಆಸ್ಪತ್ರೆ ಸು ಸಜ್ಜಿತವಾಗಿ ಎಲ್ಲ ಸೌಲಭ್ಯಗಳೊಂದಿಗೆ ಪ್ರಾರಂಭವಾಗಿರು ವುದರಿಂದ ಹೃದ್ರೋಗ ರಂಗದಲ್ಲಿ ದೊಡ್ಡ ಹೆಜ್ಜೆ ಇದಕ್ಕೆ ಎಲ್ಲ ರೀತಿಯ ನೆರವು ನೀಡಲು ಸಿದ್ದ ಎಂದು ಎಚ್ ಕೆ ಇ ಕೌನ್ಸಿಲ್ ನ ಮಾಜಿ ಸದಸ್ಯ ನಿತಿನ್ ಬಿ. ಜವಳಿ ಶುಭ ಹಾರೈಸಿದರು.


ಉದ್ಯಮಿಗಳಾದ ವೆಂಕಟೇಶ ಕಡೇಚೂರ್, ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ್, ಕಲಬುರಗಿ ಮಹಾನಗರ ಪಾಲಿಕೆಯ ಮಾಜಿ ಉಪಮೇಯರ್ ನಾಗವೇಣಿ ತಿಪ್ಪಣ್ಣಪ್ಪ ಕಮಕನೂರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಪ್ರಮೀಳಾ ಎಂ.ಕೆ, ಡಾ. ರಾಜೇಶ್ ಕಡೇಚೂರ್, ಶ್ರೀಮತಿ ಕೋಮಲೇಶ್ವರಿ ಅರುಣ್ ಕುಮಾರ್, ಅಂತರಾಷ್ಟ್ರೀಯ ಖ್ಯಾತಿಯ ಜಾದುಗಾರ ಕುದ್ರೋಳಿ ಗಣೇಶ್ ಇದ್ದರು. ಆಕಾಶವಾಣಿಯ ನಿವೃತ್ತ ಕಾರ್ಯಕ್ರಮಕ್ಕೆ ಸ್ವಾಗತಿಸಿ ನಿರೂಪಣೆ ಮಾಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top