ರಾಜ್ಯ ಅಬಕಾರಿ ಆಯುಕ್ತರಿಗೆ ಕಲಬುರಗಿ ನಿಯೋಗದಿಂದ ಅಭಿನಂದನೆ

Upayuktha
0


ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿಗಳಾಗಿ ಅನುಪಮ ಸೇವೆ ಸಲ್ಲಿಸಿ ಈಗ ಕರ್ನಾಟಕ ರಾಜ್ಯ ಅಬಕಾರಿ ಇಲಾಖೆಯ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವೆಂಕಟೇಶ್ ಕುಮಾರ್ ಅವರನ್ನು ಬೆಂಗಳೂರಿನ ಆಯುಕ್ತಾಲಯದ ಕಚೇರಿಯಲ್ಲಿ ಜುಲೈ 16 ರಂದು ಅಭಿನಂದಿಸಲಾಯಿತು. ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಸದಾನಂದ ಪೆರ್ಲ, ರಾಜ್ಯ ವೈನ್ ಮರ್ಚೆಂಟ್ ಫೆಡರೇಶನ್ ನ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ, ಕಲಬುರಗಿ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಕಡೇಚೂರ್ ಹಾಗೂ ಗುತ್ತಿಗೆದಾರರಾದ ಸತೀಶ್ ಸಲಗರ್ ಈ ಸಂದರ್ಭದಲ್ಲಿ ಜತೆಗಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top