ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ''ಹದಿಹರೆಯದವರಲ್ಲಿ ಆರೋಗ್ಯ ಮತ್ತು ನೈರ್ಮಲ್ಯ'' ಕುರಿತು ಕಾರ್ಯಾಗಾರವು ಜು 10ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಪುತ್ತೂರಿನ ಸಿಟಿ ಆಸ್ಪತ್ರೆ ಹಾಗೂ ಉಷಾ ಪಾಲಿಕ್ಲಿನಿಕ್ ನ ವೈದ್ಯರಾದ ಡಾ. ಸ್ವಾತಿ ಭಟ್ ಮಾತನಾಡಿ ಆರೋಗ್ಯಕರ ಆಹಾರದ ಮಹತ್ವದ ಕುರಿತು ಮಾಹಿತಿ ನೀಡಿದರು. ಹದಿಹರೆಯದ ವಿದ್ಯಾರ್ಥಿನಿಯರ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ವಿವರಿಸಿ, ಈ ಸಮಯದಲ್ಲಿ ಉಂಟಾಗುವ ಆರೋಗ್ಯದ ಸಮಸ್ಯೆಗಳನ್ನು ತಪ್ಪಿಸಲು ನಿಯಮಿತ ವ್ಯಾಯಾಮ, ಪೌಷ್ಟಿಕ ಆಹಾರ, ಸಾಕಷ್ಟು ನಿದ್ದೆ, ಒತ್ತಡ ರಹಿತ ಜೀವನ ಅಗತ್ಯ ಎಂದರು.
ಸಮತೋಲನಯುಕ್ತ ಆಹಾರವು ದೇಹದ ಸಮಗ್ರ ಬೆಳವಣಿಗೆ ಮತ್ತು ಉತ್ತಮ ಆರೋಗ್ಯಕ್ಕೆ ಅವಶ್ಯಕ ಎಂದು ತಿಳಿಸಿದರು. ಜೊತೆಗೆ ಹದಿಹರೆಯದಲ್ಲಿ ಬರುವ ಹಲವು ಆರೋಗ್ಯ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿದರು.
ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಈ ಉಪನ್ಯಾಸ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮದ ಸಂಪೂರ್ಣ ಪ್ರಯೋಜನ ಪಡೆಯುವುದರ ಜೊತೆಗೆ ವೈಯಕ್ತಿಕ ಮತ್ತು ಶೈಕ್ಷಣಿಕ ಜೀವನವನ್ನು ಸುಧಾರಿಕೊಳ್ಳಲು ಪ್ರಯತ್ನಿಸಬೇಕೆಂದು ಎಂದು ಹೇಳಿದರು.
ವೇದಿಕೆಯಲ್ಲಿ ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರಾದ ಸತ್ಯಾಲತಾ ರೈ ಹಾಗೂ ಅವಿನಾ ಮಾಡ್ತಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಆಶಲ್ ಜೇನ್ ಡಿಕುನ್ಹ ಸ್ವಾಗತಿಸಿ, ಕೀರ್ತನಾ ವಂದಿಸಿ, ಕಿಶೋರಿ ಎಂ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ