ಮಳೆಗಾಲದ ಜಾಗರೂಕತೆ ಮತ್ತು ಸುರಕ್ಷತಾ ಸಲಹೆಗಳು

Upayuktha
0

ಮಳೆಗಾಲದಲ್ಲಿ ಕಳ್ಳರ ಹಾಗೂ ದರೋಡೆಕಾರರ ಹಾವಳಿ ಹೆಚ್ಚಾಗುವುದರಿಂದ ಕೈಗೊಳ್ಳಬೇಕಾದ ಕೆಲವು ಸುರಕ್ಷಾ ಸಲಹೆಗಳು

  


* ಮನೆಯ ಎದುರು ಬಾಗಿಲಿಗೆ ಸೆಂಟರ್ ಲಾಕ್ ಹಾಕಿ ಭದ್ರ ಪಡಿಸಿಕೊಳ್ಳುವುದು.

* ಮನೆಯ ಮುಂಭಾಗ ಹಾಗೂ ಹಿಂಬದಿ ಬಾಗಿಲಿಗೆ ಒಳಗಡೆಯಿಂದ ಕಬ್ಬಿಣದ ಅಡ್ಡ ಪಟ್ಟಿಯನ್ನು ಅಳವಡಿಸುವುದು.

*ಮನೆಯಿಂದ ಕಾರ್ಯಕ್ರಮ, ಜಾತ್ರೆ,ಗಳಿಗೆ ಹೋಗುವಾಗ ಮನೆಯಲ್ಲಿ ಕನಿಷ್ಟ ಪಕ್ಷ ಒಬ್ಬರಾದರೂ ಮನೆಯಲ್ಲಿ ಉಳಿದುಕೊಳ್ಳುವುದು.

*ಗುಜರಿ ಹೆಕ್ಕುವವರು,ಹಾಸಿಗೆ ಮಾರಾಟ, ಬೆಡ್ ಸಿಟ್ ಮಾರಾಟ,ಸ್ಟವ್ ರಿಪೇರಿ ಬಂದಲ್ಲಿ ಅವರ ಆದಾರ್ ಕಾರ್ಡ್ ನ ಪೋಟೋ ಹಾಗೂ ಅವರ ಪೋಟೊ ಮೊಬೈಲ್ ನಲ್ಲಿ ತೆಗೆದಿಡುವುದು.

* ಗ್ಯಾಸ್ ಸಿಲಿಂಡರ್ ಬದಲಿಸುವ ಸಮಯ ಗ್ಯಾಸ್ ಸಿಲಿಂಡರ್ ಗಳನ್ನು ರಸ್ತೆ ಬದಿಯಲ್ಲಿ ಇಟ್ಟು ಹೋಗಬಾರದು.

* ಹಗಲು/ರಾತ್ರಿ ಹೊತ್ತಿನಲ್ಲಿ ಸಂಶಯಾಸ್ಪದವಾಗಿ ಯಾವುದೇ ವಾಹನ ರಸ್ರೆಯಲ್ಲಿ ನಿಂತಿದ್ದರೆ ನೋಂದಣಿ ನಂಬ್ರ ಬರುವಂತೆ ಪೊಟೋ ತೆಗೆದಿಟ್ಟುಕೊಳ್ಳುವುದು.

* ರಸ್ತೆಗೆ ಕಾಣುವಂತೆ ಬಾಗಿಲಿಗೆ, ಗೇಟಿಗೆ ಬೀಗ ಹಾಕಬಾರದು.

* ಮನೆಯಲ್ಲಿ ಒಂಟಿಯಾಗಿರುವಾಗ ಮುಂಬಾಗಿಲು ಹಾಕಿಕೊಂಡು ಕೆಲಸ ಮಾಡುವುದು.

* ಮುಂಬಾಗಿಲು ಮತ್ತು ಹಿಂಬಾಗಿಲಿಗೆ ಸಮಾನ ಪ್ರಾಮುಖ್ಯತೆ ನೀಡುವುದು. 

* ಮನೆಯ ಬಾಗಿಲು ತಟ್ಟಿದಾಗ, ಬೆಲ್ ಮಾಡಿದಾಗ ತಕ್ಷಣ ಬಾಗಿಲು ತೆರೆಯದೆ  ಕಿಟಕಿಯಿಂದ ನೋಡಿ ಖಚಿತಪಡಿಸಿಕೊಂಡು ವ್ಯವಹರಿಸುವುದು. 

* ಅಪರಿಚಿತರು ಮನೆ ಬಳಿ ಬಂದು  ನೀರು ವಿಳಾಸ ಇತ್ಯಾದಿ  ಕೇಳಲು  ಬಂದಾಗ ಅವರಲ್ಲಿ  ಜಾಗೃತೆಯಿಂದ  ವ್ಯವಹರಿಸುವುದು. 

* ನೆರೆಹೊರೆಯವರೊಂದಿಗೆ ಸಂಬಾಷಣೆಯಲ್ಲಿ ತೊಡಗಲು ಅಥವಾ ಸಮಯ ಕಳೆಯಲು ತೆರಳುವಾಗ ಮನೆಗೆ ಮತ್ತು ಗೇಟಿಗೆ ಬೀಗ ಹಾಕುವುದನ್ನು ಮರೆಯಬೇಡಿ.

* ಮನೆಗಳಲ್ಲಿ ಅಪ್ರಾಪ್ತ ವಯಸ್ಸಿನವರನ್ನು, ವಯೋವೃದ್ದರನ್ನು  ಬಿಟ್ಟು  ಹೋಗುವುದನ್ನು  ತಪ್ಪಿಸಿ.

* .ಅಂಚೆ ಕೊರಿಯರ್ ಪಾರ್ಸೆಲ್ ಉಡುಗೊರೆಗಳನ್ನು ಪಡೆದು ಕೊಳ್ಳುವಾಗ ಖಚಿತಪಡಿಸಿಕೊಂಡು ವ್ಯವಹರಿಸಿಕೊಳ್ಳುವುದು.

* ಕಿಟಕಿಯ ಪಕ್ಕ  ಬೆಲೆ ಬಾಳುವ ವಸ್ತುಗಳು ಮೊಬೈಲ್ ಫೋನ್ ಇಡುವುದು ತಪ್ಪಿಸಿ.

* ಬೆಲೆ ಬಾಳುವ ವಸ್ತುಗಳನ್ನು ಆದಷ್ಟು ಬ್ಯಾಂಕ್  ಲಾಕರ್ ಗಳಲ್ಲಿ ಇಡುವುದು ಉತ್ತಮ.

* ಮನೆ ಬಾಗಿಲುಗಳಿಗೆ  ಮ್ಯಾಜಿಕ್ ಅಲಾರ್ಮ್ ಸಿಸ್ಟಮ್ ಗಳಂತಹ ಸುರಕ್ಷಾ ಸಾಮಗ್ರಿಗಳ ಬಗ್ಗೆ ಒತ್ತು ಕೊಡಿ.

* ನೀವು ಮನೆಯಲ್ಲಿ ಮಲಗುವ ಸಮಯದಲ್ಲಿ  ಬಾಗಿಲು, ಕಿಟಕಿ  ಬೀಗ ಹಾಕಿ ಭದ್ರಪಡಿಸಿರುವುದನ್ನು  ಪುನ; ಖಚಿತ ಪಡಿಸಿಕೊಳ್ಳುವುದು.

* ಮನೆಗೆ ಬೀಗ ಹಾಕಿ ಪರ ಊರಿಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಅಕ್ಕ ಪಕ್ಕದವರಿಗೆ ಸ್ಥಳೀಯ ಪೊಲೀಸ್ ಠಾಣೆಗೆ  ಮಾಹಿತಿ  ನೀಡುವುದು.

* ಹೊಸದಾಗಿ ಬಾಡಿಗೆ  ಬರುವ ವ್ಯಕ್ತಿಗಳ ಬಗ್ಗೆ ಮನೆ ಕೆಲಸದವರ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಭಾವ ಚಿತ್ರವನ್ನು  ಅದಾರ್ ಕಾರ್ಡ್ ,ಅವರ ರಕ್ತ ಸಂಬಂದಿಗಳ ಮೊಬೈಲ್ ನಂ ಪಡೆಯಲು ಮರೆಯಬೇಡಿ.

* ಅನುಮಾನಾಸ್ಪದ ವ್ಯಕ್ತಿ  ವಸ್ತು ವಾಹನಗಳ ಬಗ್ಗೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ  ಮಾಹಿತಿ ನೀಡಿ.

* ಚಿನ್ನದ ಒಡವೆಗಳನ್ನು ಪಾಲೀಶ್ ಮಾಡುತ್ತೆನೆಂದು ಚಿನ್ನದ ಒಡವೆ ಮಾರಾಟ ಮಾಡಲು ಮನೆಯ ಬಳಿ ಬರುವವರ ಬಗ್ಗೆ  ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ. 

* ಜನರಿಲ್ಲದ ಪ್ರದೇಶದಲ್ಲಿ ಒಂಟಿಯಾಗಿ ಹೆಂಗಸರು ಓಡಾಡುವುದನ್ನು ಆದಷ್ಟು ತಪ್ಪಿಸುವುದು.

* ಒಂಟಿಯಾಗಿ ಓಡಾಡುವಾಗ  ಅಪರಿಚಿತ ವ್ಯಕ್ತಿಗಳು ನಿಮ್ಮ ಬಳಿ ಬಂದು ವಿಳಾಸ ಕೇಳುವುದು,ಮಾತನಾಡಿಸುವುದು ಪ್ರಯತ್ನ  ಮಾಡಿದಾಗ ಎಚ್ಚರದಿಂದ  ವ್ಯವಹರಿಸುವುದು. 

* ಬ್ಯಾಂಕ್ ಅಂಗಡಿ ಪೊಸ್ಟ್ ಆಫಿಸ್ ಬಳಿ ಅಪರಿಚಿತರು ನಿಮ್ಮ  ಹಣ ಕೆಳಗೆ ಬಿದ್ದಿದೆ ಎಂದು ತಿಳಿಸಿದಾಗ ಮೊದಲು ನಿಮ್ಮ ಬಳಿಯಿರುವ ಹಣ ಸುಭದ್ರವಾಗಿದೇಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ.

* ಮೋಹಕ್ಕೆ ಬಲಿಯಾಗಿ ಸುಲಿಗೆಗೆ  ಒಳಗಾಗಬೇಡಿ, ಒಂಟಿಯಾಗಿ ಓಡಾಡಿವಾಗ ಅಪರಿಚಿತ  ವ್ಯಕ್ತಿಗಳು ನಿಮ್ಮ ಬಳಿ ನಿಧಾನವಾಗಿ ದ್ವಿಚಕ್ರದ  ವಾಹನ ಚಾಲನೆ ಮಾಡಿಕೊಂಡು ಬಂದಾಗ ಅವರ ಕೈ ಗೆಟುಕುವ ಅಂತರದಲ್ಲಿ ನಿಲ್ಲಬೇಡಿ.

* ಜನನಿಬಿಡ ಪ್ರದೇಶದಲ್ಲಿ ಪಾರ್ಕ್, ಕತ್ತಲೆಯಲ್ಲಿ ಕುಳಿತುಕೊಳ್ಳುವ  ಹವ್ಯಾಸ ತಪ್ಪಿಸಿ. 

* ಅಪರಿಚಿತರು  ನಂಬಿಸುವ  ಅತೀಂದ್ರಿಯ ಶಕ್ತಿಗಳು, ಮಹಾನ್ ಪುರುಷರೆಂದು ಹೇಳಿದಾಗ ನಿಮ್ಮ ಮಾನಸಿಕ ಸಮತೋಲನವನ್ನು ಕಳೆದುಕೊಂಡು  ಅವರ  ನಿಯಂತ್ರಣಕ್ಕೆ  ಒಳಗಾಗಿ ಮೋಸ ಹೋಗಬೇಡಿ. 

* ನಿಮ್ಮ ಬಳಿ ಅನುಮಾನಾಸ್ಪದ ವ್ಯಕ್ತಿ ಬಂದರೆ ತಕ್ಷಣ ಜೋರಾಗಿ ಕೂಗಿಕೊಂಡು ಅಕ್ಕಪಕ್ಕದವರನ್ನು ಸೇರಿಸಿ.

* ವಾಯು ವಿಹಾರಕ್ಕೆ  ಹೋಗುವ ಸಂದರ್ಭದಲ್ಲಿ ಚಿನ್ನದ ಸರಗಳನ್ನು  ಬಟ್ಟೆಯಿಂದ  ಮರೆಮಾಡಿಕೊಳ್ಳಿ.

* ಅನಾವಶ್ಯವಾಗಿ ಅಧಿಕ ಆಭರಣಗಳನ್ನು ಧರಿಸಿ ಪ್ರದರ್ಶಿಸಬೇಡಿ ಕಳ್ಳರನ್ನು  ಆಕರ್ಷಿಸಬೇಡಿ.

* ಆನ್‌ಲೈನ್ ವಂಚನೆ ಬಗ್ಗೆ ಎಚ್ಚರಿಕೆಯಿಂದ ಇರಿ.

* ಅಗತ್ಯ ಸಮಯದಲ್ಲಿ  112 ಗೆ ಕರೆ ಮಾಡಿ ನಿಮ್ಮ ಸಮಸ್ಯೆ ಯನ್ನು ತಿಳಿಸಿ.


-ಸತೀಶ್ ನಾಯ್ಕ್, ಹೆಗಡೆ


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top