ಶ್ರೀ ಭಾರತಿ ವಿದ್ಯಾ ಪೀಠದಲ್ಲಿ ರಾಮಾಯಣ ಮಾಸಾಚರಣೆಗೆ ಚಾಲನೆ

Upayuktha
0


ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ರಾಮಾಯಣ ಮಾಸಾಚರಣೆಯನ್ನು ವಿಶೇಷ ರೀತಿಯಲ್ಲಿ ಪ್ರಾರಂಭಿಸಲಾಯಿತು. ಇಂದು (ಜು.16) ಬೆಳಗ್ಗೆ 9:30ಕ್ಕೆ ಶ್ರೀ ರಾಮನ ವಿಗ್ರಹದ ಆಗಮನದೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಯೋಗಾಚಾರ್ಯ ಶ್ರೀ ಪುಂಡರೀಕಾಕ್ಷ ಬೆಳ್ಳೂರು ಇವರು ರಾಮಾಯಣದ ಜೀವನ ಮೌಲ್ಯಗಳನ್ನು ರಾಮಕಥಾ ಸತ್ಸಂಗದ ಮೂಲಕ ತಿಳಿಸಿದರು.


ಕಾರ್ಯಕ್ರಮದಲ್ಲಿ ಆಡಳಿತ ಸೇವಾಸಮಿತಿ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಹಾಗೂ ರಕ್ಷಕರು ಉಪಸ್ಥಿತರಿದ್ದರು. ಮಧ್ಯಾಹ್ನ ಭಜನೆ, ಮಹಾಮಂಗಳಾರತಿ, ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮವು ಮುಕ್ತಾಯಗೊಂಡಿತು.


إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top