ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನದ ಪ್ರಯುಕ್ತ ಮೈತ್ರೇಯಿ ವಿದ್ಯಾರ್ಥಿನಿ ನಿಲಯದಲ್ಲಿ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.
ಯೋಗ ಶಿಬಿರ ನಡೆಸಿಕೊಟ್ಟ ಉಜಿರೆ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಪ್ರಾಖ್ಯಾ ರವರು ಮಾತನಾಡಿ "ಯೋಗ ನಮ್ಮ ಅರೋಗ್ಯವಂತ ಜೀವನಕ್ಕೆ ಸಹಕಾರಿ. ವಿದ್ಯಾರ್ಥಿಗಳು ದಿನ ನಿತ್ಯ ಯೋಗ ಮಾಡಿದಾಗ ಓದಿನ ಕಡೆಗೆ ಏಕಾಗ್ರತೆ ಸಾಧಿಸಲು ಸಾಧ್ಯ" ಎಂದು ಹೇಳಿದರು.
ವೇದಿಕೆಯಲ್ಲಿ ಉಜಿರೆ ಎಸ್ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಅನನ್ಯ ರೈ, ನಿಲಯಪಾಲಿಕೆಯರಾದ ಹೇಮಾವತಿ, ಸುಜಿತಾ ಉಪಸ್ಥಿತರಿದ್ದರು. ಎನ್ಎಸ್ಎಸ್ ನಾಯಕಿ ರಾಶಿಕ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ