ಬೆಂಗಳೂರು: “ಸ್ವಾತಂತ್ರ್ಯವನ್ನು ಕೊಡಲಾಗುವುದಿಲ್ಲ, ಅದನ್ನು ಗೆಲ್ಲಬೇಕು” ಎಂಬ ನೇತಾಜಿ ಸುಭಾಸ್ ಚಂದ್ರ ಬೋಸ್ ರ ಸರ್ವಕಾಲಕ್ಕೂ ಸಲ್ಲುವ ವಾಕ್ಯ ಬೆಂಗಳೂರಿನ ಜೈನ್ (ಡೀಮ್ಡ್-ಟು-ಬೀ ಯೂನಿವರ್ಸಿಟಿ) ಯಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗಟ್ಟಿ ಧ್ವನಿಯಲ್ಲಿ ಮೊಳಗಿತು. ಸ್ವಾತಂತ್ರ್ಯೋತ್ಸವದ ಈ ಕಾರ್ಯಕ್ರಮವನ್ನು ಭಾರತೀಯ ವಾಯುಸೇನೆಯ ಮಾಜಿ ಉಪ ಮುಖ್ಯಸ್ಥರಾದ ನಿವೃತ್ತ ಏರ್ ಮಾರ್ಷಲ್ ಅನಿಲ್ ಖೋಸ್ಲಾ ಅವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಸಲಾಯಿತು.
ರಾಷ್ಟ್ರಗೀತೆಯ ಗಾಯನವು ಏಕತೆ ಮತ್ತು ದೇಶಭಕ್ತಿಯ ಭಾವಗಳನ್ನುಂಟು ಮಾಡಿತು. ಇದೇ ಸಂದರ್ಭದಲ್ಲಿ ಕಾರ್ಯಕ್ರದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ಪ್ರೊ ವೈಸ್ ಚಾನ್ಸಲರ್ ಡಾ. ದಿನೇಶ್ ನೀಲಕಂಠ್ ಮಾತನಾಡುತ್ತಾ, ಇಂದು ಹಿರಿಯರನ್ನೊಳಗೊಂಡಂತೆ ಯುವ ಸಮುದಾಯ ರಾಜ್ಯ ರಾಷ್ಟ್ರದ ಶುಚಿತ್ವದ ಕಡೆಗೆ ಹೆಚ್ಚು ಗಮನ ಹರಿಸಬೇಕಿದೆ ಎಂದರು.
ಇನ್ನೋರ್ವ ಅತಿಥಿ, ರಿಜಿಸ್ಟ್ರಾರ್ ಮತ್ತು ಎಕ್ಟಿಂಗ್ ವೈಸ್ ಚಾನ್ಸಲರ್ ಡಾ. ಜಿತೇಂದ್ರ ಕುಮಾರ್ ಮಿಶ್ರಾ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ತ್ಯಾಗ ಬಲಿದಾನಗಳನ್ನು ಸ್ಮರಿಸುತ್ತ ಭವಿಷ್ಯತ್ತಿನ ಬದುಕನ್ನು ಮತ್ತು ಜವಾಬ್ದಾರಿಯುತ ನಾಗರಿಕತೆಯನ್ನು ರೂಪಿಸುವಲ್ಲಿ ಶಿಕ್ಷಣದ ಪಾತ್ರ ಬಹಳ ಮಹತ್ವದ್ದು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಏರ್ ಮಾರ್ಷಲ್ ಖೋಸ್ಲಾ, ತಮ್ಮ ವೃತ್ತಿಜೀವನದ ಒಳನೋಟಗಳನ್ನು ಯುವ ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು. ಇಂದು ದೇಶಕ್ಕಾಗಿ ಸಮಗ್ರತೆ, ಧೈರ್ಯ ಮತ್ತು ಸೇವಾ ಮನೋಭಾವದಂತಹ ಮೌಲ್ಯಗಳನ್ನು ಯುವ ಸಮುದಾಯ ಬೆಳೆಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು. ಮೇಲಾಗಿ ಯುವಕರು ರಾಷ್ಟ್ರ ನಿರ್ಮಾಣದ ಕಡೆಗೆ ತಮ್ಮ ಮಾನಸಿಕ ಹಾಗೂ ಬೌದ್ಧಿಕ ಶಕ್ತಿಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸ್ವಾತಂತ್ರ್ಯದ ಸವಲತ್ತು ಅದನ್ನು ಕಾಪಾಡುವ ಕಾರ್ಯಕ್ಷಮತೆಯಿಂದ ಲಭಿಸುತ್ತದೆ ಎಂದು ಅವಲೋಕಿಸಿದರು. ನಂತರ ಜೈನ್ ವಿಶ್ವವಿದ್ಯಾಲಯದ ವಿವಿಧ ಕ್ಯಾಂಪಸ್ಸಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ವಿದ್ಯಾರ್ಥಿಗಳು ಪ್ರದರ್ಶಿಸಿದ ಸಂಗೀತ ಮತ್ತು ನೃತ್ಯ ಹಾಗೂ ನಾಟಕಗಳ ಮೂಲಕ ಭಾರತದ ಸಾಂಸ್ಕೃತಿಕ ಪರಂಪರೆಯನ್ನೊಮ್ಮೆ ಸ್ಮರಿಸುವಂತೆ ಮಾಡಿತು.
ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ದೇಶಭಕ್ತಿಯ ಸ್ಕಿಟ್ ಪ್ರಸ್ತುತಪಡಿಸುವ ಮೂಲಕ ಭಾರತದ ಸಶಸ್ತ್ರ ಪಡೆಗಳ ತ್ಯಾಗಕ್ಕೆ ಗೌರವ ಸಲ್ಲಿಸಿತು. ಇಂದಿನ 79ನೇ ಸ್ವಾತಂತ್ರ್ಯೋತ್ಸವದಲ್ಲಿ ಜೈನ್ (ಡೀಮ್ಡ್ ಟು ಬಿ ಯುನಿವರ್ಸಿಟಿ)ಯ ಎಲ್ಲ ಕ್ಯಾಂಪಸ್ ನ ವಿದ್ಯಾರ್ಥಿ ವೃಂದ, ಪ್ರಾಧ್ಯಾಪಕ ವೃಂದ, ಪಾಲಕ ಬಂಧುಗಳು, ಹಿಂದಣ ವಿದ್ಯಾರ್ಥಿ ವೃಂದ ಹಾಗೂ ಆಡಳಿತ ಮಂಡಳಿಯ ಸದಸ್ಯರು ಪಾಲ್ಗೊಂಡಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

