ನಡ (ಬೆಳ್ತಂಗಡಿ): ಆಟಿಡೊಂಜಿ ದಿನದ ಮಹತ್ವವನ್ನು ಮಕ್ಕಳಿಗೆ ತಿಳಿಸುವ ಮತ್ತು ಆಟಿ ತಿಂಗಳ ವಿಶೇಷ ಖಾದ್ಯಗಳ ಬಗ್ಗೆ ವಿಶೇಷ ಪ್ರಾತ್ಯಕ್ಷಿಕ ಕಾರ್ಯಕ್ರಮವನ್ನು ಆ.7 ರಂದು ನಡ ಕಾಲೇಜಿನಲ್ಲಿ ನಡೆಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಅವರು ವಹಿಸಿಕೊಂಡು ತುಳುನಾಡಿನ ಬಗ್ಗೆ ಮಾತನಾಡಿ ಹಿರಿಯರ ಮೂಢನಂಬಿಕೆಗಳು ಮೂಢನಂಬಿಕೆಗಳಲ್ಲ ಅವು ಅನುಭವದ ಮೂಲ ನಂಬಿಕೆಗಳು ಎಂದು ನುಡಿದರು.
ಉದ್ಘಾಟಕರಾಗಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ ಮತ್ತು ಸಂಪನ್ಮೂಲ ವ್ಯಕ್ತಿಗಳಾಗಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ ಮತ್ತು ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅಜಿತ್ ಆರಿಗ, ಸ್ಥಳೀಯರಾದ ಮುನಿರಾಜ ಅಜ್ರಿ, ಹಿರಿಯ ಉಪನ್ಯಾಸಕರಾದ ಶ್ರೀಮತಿ ಲಿಲ್ಲಿ ಪಿವಿ ಕಾಲೇಜ್ ವಿದ್ಯಾರ್ಥಿ ನಾಯಕ ಕುಮಾರ್ ಭವಿತ್ ಇವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


