ಪದವಿನಂಗಡಿ: ಅಂಚೆ ಇಲಾಖೆ ಜನಸಂಪರ್ಕ ಅಭಿಯಾನ

Upayuktha
0


ಮಂಗಳೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ) ಪದವಿನಂಗಡಿ ಹಾಗೂ ಅಂಚೆ ಇಲಾಖೆಯ ಸಹಯೋಗದಿಂದ ನಡೆದ ಅಂಚೆ ಜನಸಂಪರ್ಕ ಅಭಿಯಾನವನ್ನು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರು, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಧಾರ್ಮಿಕ ಆಚರಣೆಯೊಂದಿಗೆ, ಅಂಚೆ ಇಲಾಖೆಯಲ್ಲಿ ಜನಸಾಮಾನ್ಯರಿಗೆ ಸಿಗುತ್ತಿರುವ ಸೌಲಭ್ಯಗಳನ್ನು ತನ್ನ ಸಮಾಜಮುಖಿ ಕೆಲಸ ಕಾರ್ಯಗಳಲ್ಲಿ ಜೋಡಿಸಿಕೊಂಡಿರುವುದು ಶ್ಲಾಘನೀಯ ಎಂದರು.


ಅಂಚೆ ಇಲಾಖೆಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಸುಭಾಷ್ ಪಿ. ಸಾಲಿಯಾನ್ ರವರು ಅಂಚೆ ಇಲಾಖೆಯಲ್ಲಿ ದೊರೆಯುವಂತಹ ಸೌಲಭ್ಯಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.


ಗೌರವಾಧ್ಯಕ್ಷ ವಾಸುದೇವ ಕಾಮತ್ ರವರು ಇನ್ನಷ್ಟು ಸಮಾಜಮುಖಿ ಕೆಲಸ ಕಾರ್ಯಗಳು ಹೊಸ ಸಮಿತಿಯು ಮಾಡುವಂತಾಗಲಿ ಎಂದು ಶುಭ ಹಾರೈಸಿದರು.


ನಿಕಟ ಪೂರ್ವ ಮಹಾನಗರ ಪಾಲಿಕೆಯ ಸದಸ್ಯರುಗಳಾದ ಲೋಹಿತ್ ಅಮೀನ್ ಹಾಗೂ ಶ್ರೀಮತಿ ಸಂಗೀತಾ.ಆರ್. ನಾಯಕ್, ಯೂತ್ ಕ್ಲಬ್‌ನ ಅಧ್ಯಕ್ಷ ಶೇಖರ್ ಪೂಜಾರಿ ಯವರು, ಆಶ್ರಯ ಮಿತ್ರವೃಂದದ ಅಧ್ಯಕ್ಷ ಸೆಲ್ವ ಕುಮಾರ್ ಸ್ಪೂರ್ತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಜಯಲಕ್ಷ್ಮಿ ಚಂದ್ರಹಾಸ್ ಸಮಿತಿಯ ಗೌರವ ಸಲಹೆಗಾರ ಜಿ. ಪ್ರಶಾಂತ್ ಪೈ, ರಾಮ ಮುಗ್ರೋಡಿ, ಪಿ. ರಾಮ ಅಮೀನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಅಧ್ಯಕ್ಷ ಸಂದೀಪ್ ಬೊಂದೇಲ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ನಂದಕಿಶೋರ್ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು. ಜಿ. ಪ್ರಶಾಂತ್ ಪೈ ಯವರು ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top