ಮಂಗಳೂರು ದಸರಾ ವ್ಯವಸ್ಥಿತ ನಿರ್ವಹಣೆಗಾಗಿ ಪಾಲಿಕೆಗೆ ಶಾಸಕ ಕಾಮತ್‌ ಸೂಚನೆ

Chandrashekhara Kulamarva
0


ಮಂಗಳೂರು: ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಸುವ್ಯವಸ್ಥಿತವಾಗಿ ನಡೆಯುವಂತಾಗಲು ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಶಾಸಕ ವೇದವ್ಯಾಸ ಕಾಮತ್ ರವರು ಸೂಚನೆ ನೀಡಿದರು.


ದಸರ ಮೆರವಣಿಗೆ ಸಾಗುವ ರಸ್ತೆಗಳ ಕಾಮಗಾರಿಗಳನ್ನು ವಿಶೇಷ ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕುದ್ರೋಳಿ ದೇವಸ್ಥಾನದಿಂದ ಲೇಡಿಹಿಲ್, ಲಾಲ್‌ ಭಾಗ್, ಪಿ.ವಿ.ಎಸ್ ಸರ್ಕಲ್, ವೆನ್‌ಲಾಕ್ ಆಸ್ಪತ್ರೆ, ಮೋಹಿನಿ ವಿಲಾಸ್, ನ್ಯೂಚಿತ್ರ ಟಾಕೀಸ್, ಅಳಕೆ, ಮೊದಲಾದ ರಸ್ತೆಗಳ ದಾರಿ ದೀಪ ಸರಿಪಡಿಸುವುದು, ರಸ್ತೆ ವಿಭಜಕಗಳನ್ನು ಶುಚಿಗೊಳಿಸುವುದು, ರಸ್ತೆಗಳ ಹೊಂಡ ಮುಚ್ಚುವುದು, ಕಸ, ಮಣ್ಣು ತೆರವುಗೊಳಿಸುವುದು, ರಸ್ತೆಯ ಇಕ್ಕೆಲಗಳಲ್ಲಿರುವ ಮರದ ಗೆಲ್ಲುಗಳನ್ನು ಅರಣ್ಯ ಇಲಾಖೆ ನಿಯಮದಂತೆ ತೆರವುಗೊಳಿಸಬೇಕು. ಮುಂದುವರಿದು ಮಂಗಳಾದೇವಿ ದೇವಸ್ಥಾನ, ಕಾರ್ ಸ್ಟ್ರೀಟ್ ವೆಂಕಟರಮಣ ದೇವಸ್ಥಾನ ಸಂಪರ್ಕ ರಸ್ತೆಗಳಲ್ಲಿ ಎಲ್ಲಾ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಹಬ್ಬದ ಸಂಭ್ರಮಕ್ಕೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಕ್ರಮವಹಿಸುವಂತೆ ಸೂಚನೆ ನೀಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top