ಉಡುಪಿ: ಓಂ ಶಾಂತಿ ತೀರ್ಥ ಸಂಸ್ಥೆಯು ಶ್ರೀ ವೆಂಕಟಕೃಷ್ಣ ಬೃಂದಾವನದ ಸಹಯೋಗದೊಂದಿಗೆ, ಪರಮಪೂಜ್ಯ ಶ್ರೀ ಸುಗುಣೇಂದ್ರ ತೀರ್ಥರ ಹಾಗೂ ಶ್ರೀ ಸುಶ್ರೇೇಂದ್ರ ತೀರ್ಥರ ಆಶೀರ್ವಾದಗಳೊಂದಿಗೆ ಮೆಲ್ಬೋರ್ನ್ ಮಹಾನಗರದಲ್ಲಿ ಹಿಂದೂ ಅಂತ್ಯಕ್ರಿಯೆಗಳಿಗೆ ವ್ಯವಸ್ಥೆಯನ್ನು ಗುರುವಾರ (ಆ.14) ಪ್ರಾರಂಭಿಸಿದೆ.
ದಶಕಗಳಿಂದ ಬೇಡಿಕೆಯಿರುವ ಈ ವ್ಯವಸ್ಥೆಯನ್ನು ಶ್ರೀ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನಚಾರ್ಯರವರು ಉದ್ಘಾಟಿಸಿದರು.
OST ಯ ಕಾರ್ಯದರ್ಶಿ ರಾಧಾಕೃಷ್ಣರವರು ಸಂಸ್ಥೆಯ ಸೌಲಭ್ಯಗಳನ್ನು ವಿವರಿಸಿ ಎಲ್ಲರ ಸಹಕಾರವನ್ನು ಕೋರಿದರು. ಹಾಗೆ ಈ ಕಾರ್ಯದಲ್ಲಿ ಮೆಲ್ಬೋರ್ನ್ ನಗರದ ಶ್ರೀ ವೆಂಕಟ ಕೃಷ್ಣ ಬೃಂದಾವನ ನೀಡಿದ ಸಹಕಾರವನ್ನು ಶ್ಲಾಘಿಸಿದರು.
ಸರಳವಾದ ಸಮಾರಂಭವನ್ನು SvKB ಯ ರಮೇಶ ರಾವ್ ಸ್ವಾಗತಿಸಿದರು ಹಾಗೂ ಅವಿನಾಶ್ ಅಧ್ಯಾಪಕ್ ರವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ SVKB ಯ ಕಾರ್ಯಕರ್ತರು ಹಾಗು OST ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

