ಅಂಬಿಕಾದ ವಿದ್ಯಾರ್ಥಿಗಳಿಗೆ ಬಹುಮಾನ - ಶಟ್ಲ್ ಬ್ಯಾಡ್ಮಿಂಟನ್‌ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ವಿದ್ಯಾ ಭಾರತಿ ಹಾಗೂ ತೊಕ್ಕೊಟ್ಟಿನ ರಾಷ್ಟ್ರೋತ್ಥಾನ ವಿದ್ಯಾಲಯಗಳ ಸಹಯೋಗದಲ್ಲಿ ಕೊಣಾಜೆಯ ಮಂಗಳುರು ವಿಶ್ವವಿದ್ಯಾಲಯದಲ್ಲಿ ನಡೆದ ಜಿಲ್ಲಾಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಎಸ್.ಅಖಿಲ್, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆರ್ಯನ್ ಆರ್., ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಬಿ.ಆರ್. ಸೂರ್ಯ ಹಾಗೂ  ಅಕ್ಷಜ್ ರೈ ಪಿ. ತಂಡದಲ್ಲಿ ಭಾಗವಹಿಸಿರುತ್ತಾರೆ. 


ಅಂತೆಯೇ ಆಲಂಕಾರಿನ ಭಾರತಿ ವಿದ್ಯಾಸಂಸ್ಥೆಯಲ್ಲಿ ನಡೆದ 19 ವರ್ಷದ ಹಾಗೂ 70 ಕೆ.ಜಿ. ಕೆಳಗಿನ ವಿಭಾಗದ ಜಿಲ್ಲಾ ಮಟ್ಟದ ಹುಡುಗರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿ ಅಜೇಯ ಕೃಷ್ಣ ಡಿ. ದ್ವಿತೀಯ ಸ್ಥಾನ ಪಡೆದಿರುತ್ತಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top