ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ PU ಕಾಲೇಜು ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಶ್ರೀದೇವಿ ಪ್ರೌಢಶಾಲೆ ಪುಣಚ ಇಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತದೆ. 


ತಂಡದಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಭವಿಶ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ಮನ್ವಿತ್ ಬಿ ಎಲ್, ವನೀಶ್, ಮಿಥುನ್ ಶೆಟ್ಟಿ, ಪ್ರೇಕ್ಷಿತ್, ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಮನ್ವಿತ್ ಕೆ ವಿ, ಲಿಖಿತ್, ಕೀರ್ತನ್, ಸಾತ್ವಿಕ್, ಆಯುಷ್ ಭಾಗವಹಿಸಿದರು. 


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Advt Slider:
To Top