ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಶಾಲಾ ಆಡಳಿತ ಸಮಿತಿ ಅಧ್ಯಕ್ಷ ಸುಬ್ರಮಣ್ಯ ಭಟ್ ಬೆಜಪ್ಪೆ ಅವರು ರಕ್ಷಾ ಬಂಧನವೆಂದರೆ ರಕ್ಷಣೆಯ ಬಂಧ ಎಂದೂ, ರಕ್ಷಾಬಂಧನದ ಕುರಿತು ಹಾಗೂ ಆಚರಿಸುವುದರ ಉದ್ದೇಶದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ವಿದ್ಯಾರ್ಥಿಗಳು ಪರಸ್ಪರ ರಾಖಿ ಕಟ್ಟಿ ಸಿಹಿ ಸವಿದು ರಕ್ಷಾಬಂಧನ ದಿನವನ್ನು ಆಚರಿಸಿದರು.
ಆಡಳಿತ ಸಮಿತಿಯ ಜೊತೆ ಕಾರ್ಯದರ್ಶಿ ಬಾಲಕೃಷ್ಣ ಶರ್ಮ ಅನಂತಪುರ, ಆಡಳಿತ ಸಮಿತಿಯ ಸದಸ್ಯರಾದ ಶ್ಯಾಮರಾಜ ದೊಡ್ಡಮಾಣಿ, ಶಾಲಾ ಮುಖ್ಯೋಪಾಧ್ಯಾಯರಾದ ಶ್ಯಾಮ್ ಭಟ್ ದರ್ಬೆಮಾರ್ಗ ಹಾಗೂ ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾ ಸರಸ್ವತಿ ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಅಧ್ಯಾಪಿಕೆ ಶ್ರೀಮತಿ ವಿದ್ಯಾ ಹೆಗಡೆಯವರು ಕಾರ್ಯಕ್ರಮವನ್ನು ನಿರ್ವಹಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


