ನಾಳೆ (ಆ.17) ಉಮ್ಮಕ್ಕ ನೆಂಪು ಕಾರ್ಯಕ್ರಮ

Upayuktha
0


ಮಂಗಳೂರು: ಬೋಳಾರದ ದಿ. ಉಮಾವತಿ ಅವರ ಕಾರ್ಯ ಚಟುವಟಿಕೆಯನ್ನು ನೆನಪಿಸಿಕೊಳ್ಳುವ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಉಮ್ಮಕ್ಕೆ ನೆಂಪು ಕೂಟ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಮ್ಮಕ್ಕ ನೆಂಪು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ.


ಮೂರನೇ ವರ್ಷಾಂತಿಕೆಯ ಉಮ್ಮಕ್ಕೆ ನೆಂಪು ಕಾರ್ಯಕ್ರಮ ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘ (ರಿ) ಸಹಭಾಗಿತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಆಗಸ್ಟ್ 17ರ ಭಾನುವಾರದಂದು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆಯಲಿದೆ.


ಉಮ್ಮಕ್ಕೆ ನೆಂಪು ಕೂಡ್ ಕಟ್ಟ್ ದ ಪಾತೆರ ಕತೆ, ದತ್ತಿ ನಿಧಿ ಉಪನ್ಯಾಸ, ವಿದ್ಯಾರ್ಥಿನಿಯರಿಗೆ ಉಮ್ಮಕ್ಕೆ ನೆಂಪು ಪಣವುದ ಬೆರಿಸಾಯ, ಸಂತ ಕವಿ ಕನಕದಾಸ ಪ್ರಶಸ್ತಿ ಪ್ರದಾನ ಹಾಗೂ ಪದರಂಗಿತ ಕಾರ್ಯಕ್ರಮಗಳು ನಡೆಯಲಿದೆ.


ಉಮೆಕ್ಕೆನ ನೆಂಪು ಕುರಿತ ಕೂಡು ಕಟ್ಟುದ ಪಾತೆರಕತೆಯನ್ನು ಮಂಗಳೂರು ವಿವಿಯ ನಿವೃತ್ತ ಪ್ರಾಧ್ಯಾಪಕ ಪ್ರೊ. ರಾಜಾರಾಮ ತೋಲ್ಪಾಡಿಯವರು ನಡೆಸಿ ಕೊಡುವರು. ಚೇಲಾರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮತ್ತು ಲೇಖಕಿ ಡಾ. ಜ್ಯೋತಿ ಚೇಲಾರು ವಿಶೇಷ ದತ್ತಿ ಉಪನ್ಯಾಸ ನೀಡಲಿದ್ದಾರೆ.


ಉಮ್ಮಕ್ಕೆ ನೆಂಪು ಪಣವುದ ಬೆರಿ ಸಾಯ ತಲಾ ರೂ. 10,000 ವನ್ನು ಕನ್ನಡ ಮಾಧ್ಯಮದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ  ಪ್ರೌಢ ಶಾಲಾ ಮಟ್ಟದಲ್ಲಿ ಅಧಿಕ ಅಂಕಗಳಿಸಿದ ಸಾಮಾಜಿಕ ಆರ್ಥಿಕ ಬಡ ವಿದ್ಯಾರ್ಥಿನಿಯರಾದ ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ಫಾತಿಮಾತ್ ನಿಫಾನ, ಮಾಣಿಲ ಸರಕಾರಿ ಪ್ರೌಢಶಾಲೆಯ ಶೈನಾ ಲೀಸಾ ಮೊಂತೇರೋ ಮತ್ತು ಜಪ್ಪು ಮಂಗಳೂರಿನ ಕಾಸ್ಸಿಯ ಪ್ರೌಢಶಾಲೆಯ  ಪ್ರಜ್ಞಾ ಅವರಿಗೆ ನೀಡಲಾಗುವುದು.


ವಿವಿಧ ಕ್ಷೇತ್ರಗಳಲ್ಲಿ ಸಾಮಾಜಿಕ ಸೇವೆಗೈದ ಮಹನೀಯರಿಗೆ ಸಂತಕವಿ ಕನಕದಾಸ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಈ ವರ್ಷ ಪ್ರಾರಂಭಿಸಿದ್ದು, ಈ ಬಾರಿ, ಹಿರಿಯ ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಕ ಸಂಘಟಕ ಮತ್ತು ಜನಪರ ಹೋರಾಟಗಾರ ವಾಸುದೇವ ಉಚ್ಚಿಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್. ಧರ್ಮ ಮತ್ತು ಮಂಗಳೂರು ವಿಶ್ವ ವಿದ್ಯಾಲಯದ ಕುಲಸಚಿವ ಕೆ. ರಾಜು ಮೊಗವೀರ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ರೂ. 30,000 ನಗದು ಮತ್ತು ಸ್ಮರಣಿಕೆ ಫಲಕಗಳನ್ನು ಒಳಗೊಂಡಿದೆ.

.

ಸಮಾರಂಭ ದ ಅಧ್ಯಕ್ಷತೆಯನ್ನು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಅಧ್ಯಕ್ಷೆ  ಶ್ರೀಮತಿ ಶಕುಂತಲಾ ಟಿ. ಶೆಟ್ಟಿ ವಹಿಸಲಿದ್ದಾರೆ. ಪದರಂಗಿತ ಭಾವಗೀತಾ ಕಾರ್ಯಕ್ರಮವನ್ನು ಕಿನ್ನಿಗೋಳಿ ಸ್ವರಾಂಜಲಿಯ ಆಶ್ವಿಜಾ ಉಡುಪ ನಡೆಸಿ ಕೊಡಲಿದ್ದಾರೆ.


ಪತ್ರಿಕಾಗೋಷ್ಟಿಯಲ್ಲಿ ಉಮ್ಮಕ್ಕೆ ನೆಂಪು ಕೂಟ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಪ್ರೊ. ಬಿ. ಶಿವರಾಮ ಶೆಟ್ಟಿ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ,  ಕಾರ್ಯದರ್ಶಿ ಕೃಷ್ಣ ಮೂರ್ತಿ, ಜೊತೆ ಕಾರ್ಯದರ್ಶಿ ಶ್ರೀಮತಿ ಸುಚಿತಾ, ಸದಸ್ಯರಾಗಿರುವ ಪ್ರಲ್ಹಾದ್, ನಿಶಾನ್ ಶೆಟ್ಟಿ, ಕರಾವಳಿ ಲೇಖಕಿ ವಾಚಕಿಯರ ಸಂಘದ ಕಾರ್ಯದರ್ಶಿ ಶ್ರೀಮತಿ ಯಶೋದ ಮೋಹನ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top