ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ರಕ್ಷಾ ಬಂಧನದ ವಿಶೇಷ ದಿನವನ್ನು ವಿವಿಧ ಕಡೆಗಳಲ್ಲಿ ರಾಷ್ಟ್ರಾಭಿಮಾನದ ಸಂಕೇತವಾದ ರಕ್ಷೆಯನ್ನು ಕಟ್ಟುವ ಮೂಲಕ ಆಚರಿಸಲಾಯಿತು.
ನಗರದ ವಿವಿಧ ಭಾಗದಲ್ಲಿ ದೇಶ ಸೇವೆ ಗೈಯುತ್ತಿರುವ ಪೊಲೀಸ್ ಅಧಿಕಾರಿಗಳು, ಅಂಚೆ ಕಛೇರಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಸಿಬ್ಬಂದಿಗಳಿಗೆ ಗೌರವಪೂರ್ವಕವಾಗಿ ರಕ್ಷೆಯನ್ನು ಕಟ್ಟುವ ಮೂಲಕ ರಕ್ಷಾಬಂಧನ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.
ವಿವಿಧ ಕಡೆ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಚಾಲಕರಾದ ಶ್ರೇಯಸ್, ನಗರ ಕಾರ್ಯದರ್ಶಿ ಮಾಣಿಕ್ಯ ಭಟ್, ಕರ್ನಾಟಕ ದಕ್ಷಿಣ ಪ್ರಾಂತ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ, ನಗರ ಸಂಪರ್ಕ ಪ್ರಮುಖ್ ಮನೀಶ್, ಹಾಗೂ ಪ್ರಮುಖರಾದ ವಿನೀತ್, ಸಂಜನಾ, ವಾಗ್ದೇವಿ, ಭಾರ್ಗವ್, ಪ್ರಶ್ಮ, ರಂಜಿತ್, ಪುಷ್ಪ ಮತ್ತು ಅಮೃತ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







