ಡಾ. ಪ್ರಣವಾನಂದ ಶ್ರೀ- ಕೇಂದ್ರ ಸಚಿವ ನಿತಿನ್ ಗಡ್ಕರಿ ದೆಹಲಿಯಲ್ಲಿ ಭೇಟಿ
ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡದರಂತ ಪ್ರಕರಣದಲ್ಲಿ 11 ಮಂದಿ ಮಣ್ಣಿನಡಿ ಬಿದ್ದು ಜೀವ ಕಳೆದುಕೊಂಡಿರುವ ಘಟನೆಯಲ್ಲಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಿ ನ್ಯಾಯ ಕೊಡಬೇಕೆಂದು ಒತ್ತಾಯಿಸಿ ಕಲಬುರ್ಗಿ ಜಿಲ್ಲಾ ಚಿತ್ತಾಪುರ ತಾಲೂಕು ಕರದಾಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾಕ್ಟರ್ ಪ್ರಣವಾನಂದ ಶ್ರೀಗಳು ಕೇಂದ್ರ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಖಾತೆಯ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿಯಲ್ಲಿರುವ ನಿತಿನ್ ಗಡ್ಕರಿ ಅವರ ನಿವಾಸದಲ್ಲಿ ಆಗಸ್ಟ್ 19ರಂದು ಶಿವಮೊಗ್ಗದ ಸಂಸದರಾದ ಬಿ ವೈ ರಾಘವೇಂದ್ರ ಅವರ ಜೊತೆ ಭೇಟಿ ಮಾಡಿ ಶಿರೂರು ಗುಡ್ಡ ದುರಂತ ಪ್ರಕರಣದಲ್ಲಿ ಸಂತ್ರಸ್ತರಾದವರಿಗೆ ಕೂಡಲೇ ನ್ಯಾಯ ಒದಗಿಸಬೇಕು ಎಂದು ದಾಖಲೆ ಪತ್ರಗಳೊಂದಿಗೆ ಮಾಹಿತಿ ನೀಡಿ ಮನವಿ ಮಾಡಿದರು.
ಡಾ. ಪ್ರಣವಾನಂದ ಶ್ರೀಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ನಿತಿನ್ ಗಡ್ಕರಿಯವರು ಮಾತನಾಡುತ್ತಾ, ಬೇಡಿಕೆಯು ನ್ಯಾಯೋಚಿತವಾಗಿದ್ದು ಸಂತ್ರಸ್ತರಿಗೆ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಿ ಪರಿಹಾರ ಕಲ್ಪಿಸಲಾಗುವುದು. ಈ ಘಟನೆಯು ದುರದೃಷ್ಟಕರವಾಗಿದ್ದು ಸಂತ್ರಸ್ತರಿಗೆ ಸಾಂತನೆ ಹೇಳುವುದಾಗಿ ಅವರು ತಿಳಿಸಿದರು.
ಶೀಘ್ರದಲ್ಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಸಲಾಗುವುದು ಮತ್ತು ಸಂತ್ರಸ್ತರಿಗೆ ನ್ಯಾಯವನ್ನು ಒದಗಿಸಲು ಬದ್ಧನಾಗಿರುವುದಾಗಿ ಗಡ್ಕರಿ ಹೇಳಿದರು. ಸಂಸದರಾದ ಬಿ.ವೈ ರಾಘವೇಂದ್ರ ಘಟನೆಯ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿದರು ಮತ್ತು ಸಂತ್ರಸ್ತರಿಗೆ ನ್ಯಾಯೋಚಿತವಾದ ಪರಿಹಾರ ಕಲ್ಪಿಸಬೇಕಾಗಿದೆ ಎಂದು ಮನವಿ ಮಾಡಿದರು.
ಕೇಂದ್ರ ಸಚಿವರ ಸಂದರ್ಭದಲ್ಲಿ ಇರೂರು ಗುಡ್ಡ ದುರಂತ ಪ್ರಕರಣದಲ್ಲಿ ಸಂತ್ರಸ್ತರಾದ ಮನುಷ್ಯ ಸುಭಾಷ್ ನಾಯಕ್ ಮತ್ತು ಶ್ರೀನಿವಾಸ್ ನಾಯಕ ಕೂಡ ಹಾಜರಿದ್ದರು. ಶಿರೂರು ಗುಡ್ಡ ದುರಂತ ಘಟನೆಯಲ್ಲಿ ಒಟ್ಟು 11 ಬಂದಿ ಮೃತಪಟ್ಟಿದ್ದು ಅದರಲ್ಲಿ ಏಳು ಮಂದಿ ಈಡಿಗ ಸಮುದಾಯದ ನಾಯಕ್ ಪಂಗಡದವರು. ಇವರಿಗೆ ನ್ಯಾಯ ಕಲ್ಪಿಸಲು ಡಾ ಪ್ರಣವಾನಂದ ಶ್ರೀಗಳು ಈಗಾಗಲೇ ಹೆದ್ದಾರಿ ನಿರ್ಮಾಣ ಕಂಪನಿ, ಲೋಕಾಯುಕ್ತ ಹಾಗೂ ಕೋರ್ಟುಗಳಲ್ಲಿ ದಾವೆ ಸಲ್ಲಿಸಿದ್ದರು.
ಈ ಮಧ್ಯೆ ಕೇಂದ್ರ ಸಚಿವರು ಮಾತುಕತೆಗೆ ಆಹ್ವಾನಿಸಿ, ತಕ್ಷಣವೇ ಪರಿಹಾರ ಕಲ್ಪಿಸಲು ಭರವಸೆ ನೀಡಿರುವುದು ಸಂತ್ರಸ್ತರಿಗೆ ಸಂತಸವನ್ನುಂಟು ಮಾಡಲಿದೆ ಮತ್ತು ಗಡ್ಕರ್ ಅವರಿಗೆ ಹಾಗೂ ಕೇಂದ್ರ ಸಚಿವರಿಗೆ ಸಂತ್ರಸ್ತರನ್ನು ಭೇಟಿ ಮಾಡಿಸಿದ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ ಅವರಿಗೂ ಅಭಿನಂದನೆ ಸಲ್ಲಿಸುವುದಾಗಿ ಡಾ. ಪ್ರಣವಾನಂದ ಶ್ರೀಗಳು ಹೇಳಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ