ಯೋಗಾಸನ ಸ್ಪರ್ಧೆ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಚಿನ ಪದಕ

Upayuktha
0


ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸ್ವಸ್ತಿಕ ನ್ಯಾಷನಲ್ ಬಿಸ್‍ನೆಸ್ ಸ್ಕೂಲ್, ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವ ಮಾರ್ಕೆಟ್ ಬಳಿ ಇರುವ ಸುಲ್ತಾನ್ ಬತ್ತೇರಿ ಪ್ರದೇಶದ ವಾಟರ್ ಫ್ರಂಟ್ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಅದಿತಿ ಆರ್ ರೈ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ಕಂದಬಳ್ಳಕ್ಕುರಾಯ ಸಾಂಪ್ರದಾಯಿಕಯೋಗಾಸನ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ.ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

1. ಅದಿತಿಆರ್‍ರೈ         2. ಸ್ಕಂದಬಳ್ಳಕ್ಕುರಾಯ



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top