ಬೆಳ್ತಂಗಡಿ: ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಇಂದು (ಸೆ.7) ಗೀತೆ ಜತೆ ಸಾಹಿತ್ಯ ಸಾಂಗತ್ಯ ಒಂದು ವರ್ಷದ ಸಾಹಿತ್ಯ ಪರ್ವ ಉಪನ್ಯಾಸ ಮಾಲಿಕೆಯ 13ನೇ ಅಧ್ಯಾಯ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದ ಉಪನ್ಯಾಸವನ್ನು ಸಂಪನ್ಮೂಲ ವ್ಯಕ್ತಿ, ಗಮಕ ಕಲಾ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಭಟ್ ಉಜಿರೆ ನೀಡಿದರು. ಪತ್ರಕರ್ತ ಮನೋಹರ ಬಳಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳು ಶಾರದಾ ಮಾತೆ ಮತ್ತು ಭಾರತ ಮಾತೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆಗೈದರು. ಸ್ವಸ್ತಿಕ ಕುಳಮರ್ವ ಇವರ ಶಾರದಾ ಸ್ತುತಿಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಸಮಿತಿಯ ಕಾರ್ಯದರ್ಶಿ ಸುಭಾಷಿಣಿಯವರು ರಚಿಸಿದ ಆಶಯ ಗೀತೆಯನ್ನು ಅಶ್ವಿಜ ಶ್ರೀಧರ್ ಇವರು ಭಾವಪೂರ್ಣವಾಗಿ ಹಾಡಿದರು. ರವೀಂದ್ರ ಶೆಟ್ಟಿ ಬಳಂಜ ಇವರು ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿದರು. ಅಭ್ಯಾಗತರನ್ನು ತಾಂಬೂಲ ನೀಡಿ ಸ್ವಾಗತಿಸಲಾಯಿತು.
ಸಂಪನ್ಮೂಲ ವ್ಯಕ್ತಿ ರಾಮಕೃಷ್ಣ ಭಟ್ ಉಜಿರೆ ಇವರು ಭಗವದ್ಗೀತೆಯ 13ನೇ ಅಧ್ಯಾಯ ದೇಹ ಮತ್ತು ಆತ್ಮ ಇವುಗಳ ನಡುವಿನ ವ್ಯತ್ಯಾಸವನ್ನು ವಿವರಿಸುವ ಕ್ಷೇತ್ರ ಕ್ಷೇತ್ರಜ್ಞ ವಿಭಾಗ ಯೋಗದಲ್ಲಿ ಪ್ರಕೃತಿ, ಪುರುಷ, ಜ್ಞಾನ ಮತ್ತು ಜ್ಞೇಯ, ಜ್ಞಾನದ ಸ್ವರೂಪ, ಮೋಕ್ಷದ ಮಾರ್ಗ, ಆತ್ಮದ ಸ್ವರೂಪದ ಬಗ್ಗೆ ಶ್ರೀಕೃಷ್ಣ ಭಗವಂತ ಅರ್ಜುನನಿಗೆ ನೀಡಿದ ವಿವರಣೆಯನ್ನು ಸಾಹಿತ್ಯದ ಅನೇಕ ಉದಾಹರಣೆಗಳೊಂದಿಗೆ ಮನ ಮುಟ್ಟುವಂತೆ ವಿವರಿಸಿದರು.
ಮನೋಹರ ಬಳಂಜ ಇವರು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ತಾಲೂಕು ಸಮಿತಿ ಆಯೋಜಿಸಿರುವ ಗೀತೆ ಜತೆ ಸಾಹಿತ್ಯ ಸಾಂಗತ್ಯ ಕಾರ್ಯಕ್ರಮವನ್ನು ಶ್ಲಾಘಿಸುತ್ತಾ ಇಂತಹ ಕಾರ್ಯಕ್ರಮಗಳ ಅಗತ್ಯವನ್ನು ತಿಳಿಸಿ, ಇದರ ಪ್ರಯೋಜನವನ್ನು ಯುವಜನರು ಪಡೆಯುವಂತಾಗಲಿ ಎಂದು ಹಾರೈಸಿದರು.
ಅತಿಥಿಗಳನ್ನು ಪುಸ್ತಕ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶ್ರೀಮತಿ ವಸಂತಿ ಕುಳಮರ್ವ ಇವರು ಕಾರ್ಯಕ್ರಮವನ್ನು ನಿರೂಪಿಸಿ, ಡಾ. ಶ್ರೀಧರ ಭಟ್ ಇವರು ಸರ್ವರಿಗೂ ಧನ್ಯವಾದವನ್ನಿತ್ತರು. ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

