ಮಂಗಳೂರು: 2025ರ ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಧಾನ (ಪ್ರಬುದ್ಧ) ಕವಿಗೋಷ್ಠಿಗೆ ಸಾಹಿತಿ, ಮಂಗಳೂರು ಕೆನರಾ ಪದವಿ ಪೂರ್ವ ಕಾಲೇಜು ಉಪನ್ಯಾಸಕರಾಗಿರುವ ರಘು ಇಡ್ಕಿದು ಆಯ್ಕೆಯಾಗಿದ್ದಾರೆ.
ತುಳು ಮತ್ತು ಕನ್ನಡ ಭಾಷೆಗಳಲ್ಲಿ ಇವರ 32 ಕೃತಿಗಳು ಪ್ರಕಟವಾಗಿದ್ದು, ಕಥೆ, ಕವನ, ನಾಟಕ, ವಿಮರ್ಶೆ, ರೂಪಕ, ಅನುವಾದ, ಮಕ್ಕಳ ಸಾಹಿತ್ಯ, ವ್ಯಕ್ತಿ ಚಿತ್ರ,ಅಂಕಣ ಬರಹ, ಭಾವಗೀತೆ, ಗಜಲ್ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ನಿರಂತರವಾಗಿ ಬರೆಯುತ್ತಿದ್ದಾರೆ.
ಸೆ.27ರಂದು ಈ ಪ್ರಧಾನ ಕವಿಗೋಷ್ಠಿಯಲ್ಲಿ ತುಳುನಾಡನ್ನು ಪ್ರತಿನಿಧಿಸುವ ಮೂಲಕ ಅವರು ತುಳು ಕವನವನ್ನು ಪ್ರಸ್ತುತಪಡಿಸಲಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


