ಧರ್ಮಜಾಗೃತಿ ಸಮಾವೇಶದಲ್ಲಿ ಮಂಡಿಸಿದ ನಿರ್ಣಯಗಳು

Upayuktha
0

 



• ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಹಾಗೂ ಹೆಗ್ಗಡೆಯವರ ತೇಜೋವಧೆ ಬಗ್ಗೆ ರೂಪಿಸಿದ ಷಡ್ಯಂತ್ರಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ನ್ಯಾಯಯುತ ತನಿಖೆಗೆ ಅನುಕೂಲ ಮಾಡಿಕೊಟ್ಟ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹಸಚಿವರು ಹಾಗೂ ಎಸ್.ಐ.ಟಿ. ತಂಡದ ಎಲ್ಲಾ ಆಧಿಕಾರಿಗಳಿಗೆ ಧನ್ಯವಾದ ಸಲ್ಲಿಸಲು ನಿರ್ಧರಿಸಲಾಯಿತು.

• ಸಾಮಾಜಿಕ ಜಾಲತಾಣಗಳು ಹಾಗು ದೃಶ್ಯಮಾಧ್ಯಮಗಲ್ಲಿ ಆಗುತ್ತಿರುವ ಸುಳ್ಳುಸುದ್ದಿಯ ಪ್ರಸಾರವನ್ನು ತಡೆಗಟ್ಟಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.

• ಶ್ರದ್ಧಾಕೇಂದ್ರಗಳು ಹಾಗೂ ಧಾರ್ಮಿಕ ನಂಬಿಕೆಗಳ ವಿರುದ್ಧ ಹೇಳಿಕೆ ನೀಡಿ ಶಾಂತಿಭಂಗ ಮಾಡುತ್ತಿರುವ ಸಂಘ-ಸಂಸ್ಥೆಗಳ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು.

• ಮುಂದೆ ಇಂತಹ ವ್ಯವಸ್ಥಿತ ಷಡ್ಯಂತ್ರಗಳು ನಡೆದರೆ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಸಂಘಟಿತ ಹೋರಾಟ ನಡೆಸಲಾಗುವುದು.

• ಇಂತಹ ಸಂಚುಗಳು ಆಗಾಗ ನಡೆಯುತ್ತಿರುವುದರಿಂದ ಧರ್ಮಸಂರಕ್ಷಣಾ ಸಮಿತಿಯನ್ನು ಬಲಪಡಿಸಿ ವರ್ಷಕ್ಕೆ ಒಂದು ಬಾರಿ ಇಂತಹ ಸಮಾವೇಶವನ್ನು ಅಲ್ಲಲ್ಲಿ ಆಯೋಜಿಸಬೇಕು.

• ಎಲ್ಲರೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರೊಂದಿಗೆ ದೃಢಸಂಕಲ್ಪದಿಂದ ನಿಂತು ಧರ್ಮ ಸಂರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿರುತ್ತೇವೆ ಎಂದು ನಿರ್ಧರಿಸಲಾಯಿತು.

• ಠರಾವಿನ ಪ್ರತಿಯನ್ನು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿ, ಗೃಹಸಚಿವರು ಮತ್ತು ದಕ್ಷಿಣಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಕಳುಹಿಸಲು ನಿರ್ಧರಿಸಲಾಯಿತು.  



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top