ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

Upayuktha
0


ಬೆಂಗಳೂರು, ವೈಟ್‌ಫೀಲ್ಡ್: ಮೂರು ತಿಂಗಳ ಹಿಂದೆ ಸಂಭವಿಸಿದ ಭೀಕರ ವಿದ್ಯುತ್ ಅಪಘಾತದಿಂದ ತೀವ್ರವಾಗಿ ಗಾಯಗೊಂಡ 17 ವರ್ಷದ ಪಶ್ಚಿಮ ಬಂಗಾಳ ಮೂಲದ ಯುವಕನಿಗೆ, ಮೆದುಳಿಗೆ ಫಂಗಸ್ ಹಿಡಿದಷ್ಟು ಗಂಭೀರ ಸ್ಥಿತಿಯಲ್ಲಿದ್ದರೂ, ಮೆಡಿಕವರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಶಸ್ತ್ರಚಿಕಿತ್ಸೆಯಿಂದ ಹೊಸ ಬದುಕು ದೊರೆತಿದೆ.


ಆಘಾತದ ಪರಿಣಾಮವಾಗಿ ಯುವಕನ ಬಲ ಪಾರಿಯೆಟಲ್ ಭಾಗದ ತ್ವಚೆ ಮತ್ತು ಮೂಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಮೆದುಳಿನ ಭಾಗವೇ ಹೊರಬಿದ್ದಂತಹ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ, ಆ ಭಾಗದಲ್ಲಿ ಸೋಂಕು ಹರಡಿದ ಪರಿಣಾಮ ಫಂಗಲ್ ಇನ್ಫೆಕ್ಷನ್ ಕೂಡ ಅಭಿವೃದ್ಧಿಯಾಗಿತ್ತು.


ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಂತರ ಯುವಕನನ್ನು ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ತರಲಾಗಿದ್ದು, ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಸಲಹೆಯ ಮೇರೆಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಯಿತು.


ಆಗಮಿಸಿದಾಗ ಯುವಕನ ದೇಹದ ಎಡಭಾಗ ಸಂಪೂರ್ಣವಾಗಿ ದುರ್ಬಲವಾಗಿತ್ತು. ಡಾ. ದೀಪಕ್ ಅವರು ಮೆದುಳಿನ ಗಾಯದ ಭಾಗವನ್ನು ಕ್ಲೀನಿಂಗ್ ಮಾಡಿ, ಮೆದುಳಿನ ಮತ್ತು ಫ್ಲ್ಯಾಪ್ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಲಾಯ್ತು.  ಇದು ಅಪರೂಪದ ಹಾಗೂ ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯಾಗಿದ್ದು, ಅದನ್ನು ಯಶಸ್ವಿಯಾಗಿ ನೆರವೇರಿಸಿದರು.ಇಂದು ಯುವಕ ಸಂಪೂರ್ಣ ಗುಣಮುಖನಾಗಿ ತಾನು ಮನೆಗೆ ಮರಳಿದ್ದಾನೆ.


“ಇದು ಕೇವಲ ಶಸ್ತ್ರಚಿಕಿತ್ಸೆಯಲ್ಲ, ಜೀವದ ಮೇಲಿನ ವಿಜಯದ ಕಥೆಯಾಗಿದೆ. ಇಂತಹ ಪ್ರಕರಣಗಳು ನಮ್ಮ ಕರ್ತವ್ಯ ಮತ್ತು ಸಾಮರ್ಥ್ಯವನ್ನು ಸದಾ ನೆನಪಿಸುತ್ತವೆ,” ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top