ಪಾಣಾಜೆ ಸುಬೋಧ ಪ್ರೌಢಶಾಲೆಗೆ ಅಮ್ಜದ್ ಖಾನ್ ದಂಪತಿಗಳಿಂದ ಉದಾರ ದೇಣಿಗೆ

Upayuktha
0


ಪಾಣಾಜೆ: ಪೋಳ್ಯ ನಿವಾಸಿ, ಕೊಡುಗೈದಾನಿ, ವಿದ್ಯಾಭಿಮಾನಿ, ವಿದೇಶದಲ್ಲಿ ಉದ್ಯಮಿಯಾಗಿರುವ ಹಾಗೂ ಎಜುಕೇಶನಲ್ ಎಕ್ಸಲೆನ್ಸ್ ಫೌಂಡೇಶನ್ ನ ಅಧ್ಯಕ್ಷರಾಗಿರುವ ಅಮ್ಜದ್ ಖಾನ್ ಹಾಗೂ ಅವರ ಧರ್ಮಪತ್ನಿ ಸುಬೋಧ ಪ್ರೌಢಶಾಲೆಯ 1996-97 ನೇ ಸಾಲಿನ ಪ್ರತಿಭಾವಂತ ಹಿರಿಯ ವಿದ್ಯಾರ್ಥಿನಿ ಶ್ರೀಮತಿ ತಸ್ನಿ ಅಮ್ಜದ್ ಅವರ ಜೊತೆಯಲ್ಲಿ ಸೆ. 3 ರಂದು ಶಾಲೆಗೆ ಭೇಟಿ ನೀಡಿದರು.


ಅವರನ್ನು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ನಿರ್ಮಲ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.


ಶಾಲೆಯ ಈಗಿನ ಸ್ಥಿತಿಯನ್ನು ಅವರಿಗೆ ವಿವರಿಸಿ ಮನದಟ್ಟು ಮಾಡಲಾಯಿತು. ಹಳ್ಳಿಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದನ್ನು ಶ್ಲಾಘಿಸಿದ ಅವರು ಗೌರವ ಶಿಕ್ಷಕರಾಗಿ ಶಾಲೆಯಲ್ಲಿ ದುಡಿಯುತ್ತಿರುವ ಶಿಕ್ಷಕರ ವೇತನವನ್ನು ಭರಿಸಲು ಸಹಾಯವಾಗುವಂತೆ ಪ್ರತಿ ತಿಂಗಳು ಶಾಲೆಗೆ ರೂ 10,000 ದಂತೆ ವರ್ಷಕ್ಕೆ ರೂ 1,20,00 ವನ್ನು ದೇಣಿಗೆಯಾಗಿ ನೀಡುವುದಾಗಿ ಘೋಷಿಸಿ ಆಗಸ್ಟ್ ತಿಂಗಳ ದೇಣಿಗೆ ಹಣವನ್ನು ನಗದಾಗಿ ಶಾಲಾ ಸಂಚಾಲಕರಿಗೆ ಹಸ್ತಾಂತರಿಸಿದರು.


ಕಳೆದ ಸಾಲಿನಲ್ಲಿ ಶ್ರೀಮತಿ ತಸ್ನಿ ಅಮ್ಜದ್ ಅವರು ರೂ 40,000/-ವನ್ನು ಶಾಲೆಗೆ ದೇಣಿಗೆಯಾಗಿ ನೀಡಿದ್ದನ್ನು ಸ್ಮರಿಸುತ್ತಾ, ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ಮಾಡುತ್ತಿರುವ ಸೇವೆಯನ್ನು ಪ್ರಶಂಸಿಸುತ್ತಾ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಸಂಚಾಲಕರು ಕೃತಜ್ಞತೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ತಸ್ನಿ ಅಮ್ಜದ್ ಅವರ ಸಹಪಾಠಿಗಳಾದ ಹರೀಶ್ ನೆಲ್ಲಿತ್ತಿಮಾರು, ಶ್ರೀಮತಿ ಸವಿತಾ ಶೆಟ್ಟಿ, ರಾಜೇಶ್, ಸುರೇಶ್, ಸಂಘದ ಖಜಾಂಜಿ ಎ ಎನ್ ಕೊಳಂಬೆ ಹಾಗೂ ಚಿತ್ರಕಲಾ ಶಿಕ್ಷಕಿ ಶ್ರೀಮತಿ ಶಾರದಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top