ಕಾಸರಗೋಡು: ಕಬಕ ಶ್ರೀ ಮಹಾದೇವೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಡಾ. ವಾಣಿಶ್ರೀ ಕಾಸರಗೋಡು ಸಾರಥ್ಯದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ.) ಕಾಸರಗೋಡು ಇದರ ಸಹಯೋಗದಲ್ಲಿ ಹಾಗೂ ಮನು ಕುಮಾರ್ ಪುತ್ತೂರು ಅವರ ಶಿವಮಣಿ ಕಲಾಸಂಘ ನೇತೃತ್ವದಲ್ಲಿ 121 ನೇ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮವು ಜರಗಿತು. ಕಾರ್ಯಕ್ರಮದಲ್ಲಿ ತಂಡದ ಕಲಾವಿದರು ಕಲಾಪ್ರದರ್ಶನ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ವೇದಿಕೆಯಲ್ಲಿ ಗಣ್ಯರಾದ ಅಚ್ಯುತ ಭಟ್, ನಾರಾಯಣ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ದೇವರ ಪ್ರಸಾದ ಕೊಟ್ಟು ಗೌರವಿಸಲಾಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ