ಬೆಂಗಳೂರು: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ಕೇರಳದ ಶ್ರೀಮದ್ ಎಡನೀರು ಮಠ, ಕಾಸರಗೋಡು ಇವರ ಸಹಯೋಗದೊಂದಿಗೆ ಬುಧವಾರ (ಸೆ.3) ಸಂಜೆ 7.15 ಗಂಟೆಗೆ ಕಾಸರಗೋಡು ಜಿಲ್ಲೆಯ ಗಡಿ ಭಾಗದ ಕನ್ನಡ ಶಾಲಾ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ ಎಲ್ಲಾ ಕನ್ನಡ ಶಾಲೆಗಳಿಗೆ ಹಾಗೂ ಗ್ರಂಥಾಲಯಗಳಿಗೆ ಕನ್ನಡ ಪುಸ್ತಕಗಳನ್ನು ವಿತರಿಸಲಾಯಿತು.
ಪ್ರೊ. ಕೆ.ಸಿ ಶಿವಪ್ಪನವರು ರಚಿಸಿದ ಮುದ್ದುರಾಮನ 10 ಆವೃತ್ತಿ ಕೃತಿಗಳನ್ನು ಕೂಡ ಈ ಸಂದರ್ಭದಲ್ಲಿ ವಿತರಿಸಲಾಯಿತು. ಹೊರನಾಡು ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ ಗಡಿ ಅಭಿವೃದ್ಧಿ ಪ್ರಾಧಿಕಾರ ಹೊರತಂದಿರುವ ಹೊರನಾಡಿನ ಗಡಿ ಕನ್ನಡಿಗರಿಗೆ ಇರುವ ಶೈಕ್ಷಣಿಕ ಮತ್ತು ಔದ್ಯೋಗಿಕ ಸೌಲಭ್ಯಗಳಿಗೆ ಇರುವಂತಹ ಎಲ್ಲಾ ಸುತ್ತೋಲೆಗಳನ್ನು ಒಂದು ಕಡೆ ಪುಸ್ತಕದ ರೂಪದಲ್ಲಿ ಹೊರತಂದು ಅದನ್ನು ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳು ಬಿಡುಗಡೆಗೊಳಿಸಿದರು.
ಅದರ ಪ್ರತಿಯನ್ನು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಶಾಸಕರಿಗೆ ಎಂ.ಎ ನೆಲ್ಲಿಕುನ್ನು ಇವರಿಗೆ ಸೋಮಣ್ಣ ಬೇವಿನಮರದ ಅಧ್ಯಕ್ಷರು ಹಾಗೂ ಪ್ರಕಾಶ ಮತ್ತಿಹಳ್ಳಿ ಕಾರ್ಯದರ್ಶಿ ಗಡಿ ಪ್ರಾಧಿಕಾರ ಇವರು ನೀಡಿದರು. ಹಾಗೂ ಕಾಸರಗೋಡಿನ ಎಲ್ಲಾ ಗ್ರಂಥಾಲಯಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಗಡಿ ಪ್ರಾಧಿಕಾರದ ಸದಸ್ಯ ಎ.ಆರ್. ಸುಬ್ಬಯ್ಯ ಕಟ್ಟೆ ಹಾಗೂ ಕಾಸರಗೋಡಿನ ಪತ್ರಕರ್ತರ ಸಂಘದ ಕಾರ್ಯದರ್ಶಿ ಅಖಿಲೇಶ್ ನಗುಮುಗಂ ಹಾಗೂ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಎಡನೀರು ಮಠದ ಚಾತುರ್ಮಾಸ್ಯದ-2025 ಕಾರ್ಯಕ್ರಮದಲ್ಲಿ ಯಕ್ಷಗಾನ, ಭರತನಾಟ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಓಣಂ ಹಬ್ಬದ ಸಂದರ್ಭದಲ್ಲಿ ಸೋಮಣ್ಣ ಬೇವಿನಮರದ, ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ ಇವರು ಮಾತನಾಡಿ ಶೀಘ್ರದಲ್ಲಿ ಡಾ. ಕಯ್ಯಾರ ಕಿಞ್ಞಣ್ಣ ರೈ ಭವನವನ್ನು ಲೋಕಾರ್ಪಣೆಗೊಳಿಸುವುದಾಗಿ ತಿಳಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ