ಕನ್ನಡ ಭಾಷೆ ಸಂಸ್ಕೃತಿ ಜಾಗೃತಿ ಅಗತ್ಯ: ಡಾ. ಕೊಳ್ಚಪ್ಪೆ ಗೋವಿಂದ ಭಟ್

Upayuktha
0

ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ





ಕಾಸರಗೋಡು: 'ಕಾಸರಗೋಡಿನಲ್ಲಿ ಕನ್ನಡ ಭಾಷೆ ಉಳಿಯಬೇಕಾದರೆ ಭವಿಷ್ಯಕ್ಕಾಗಿ ಕನ್ನಡ ಜಾಗೃತಿ ಆಗಲೇಬೇಕು. ಎಳೆಯ ಮಕ್ಕಳಲ್ಲಿ ಕನ್ನಡ ಪರವಾದ ಮನೋಭಾವ ಬೆಳೆಸಬೇಕು' ಎಂದು ಹಿರಿಯ ಸಾಹಿತಿ ಕೊಳ್ಚಪ್ಪೆ ಗೋವಿಂದ ಭಟ್ ಹೇಳಿದರು. 


ಅವರು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಮತ್ತು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕೃತಿಕ ಸಮಿತಿಯ ಜಂಟಿ ಆಶ್ರಯದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಸಮಿತಿಯ ಸಹಕಾರದಲ್ಲಿ, ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಮಣ್ಯ ಕ್ಷೇತ್ರದಲ್ಲಿ ಶನಿವಾರ ನಡೆದ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದ ಕಾಸರಗೋಡು ದಸರಾ ಕವಿಗೋಷ್ಠಿಯನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡಿದರು.  


ಗಝಲ್ ಕವಿ ಡಾ. ಸುರೇಶ್ ನೆಗಳಗುಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 'ನವರಾತ್ರಿಯ ಒಂಭತ್ತು ಬಣ್ಣಗಳಲ್ಲಿ ಸಂತೋಷ, ಶಾಂತಿ, ಪ್ರೀತಿ, ಆಧ್ಯಾತ್ಮಿಕತೆಯಿಂದ ನಾಡಹಬ್ಬವಾಗಿದೆ. ಇದರಿಂದ ಸಮಾಜವು ಸುಭಿಕ್ಷವಾಗುತ್ತದೆ.'ಎಂದು ಹೇಳಿದರು.

 


ಮುಖ್ಯ ಅತಿಥಿಗಳಾಗಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾದ ಪ್ರಾಧ್ಯಾಪಕ ಜಯಾನಂದ ಪೆರಾಜೆ, ಸಂಚಾಲಕಿ ಡಾ. ಶಾಂತಾ ಪುತ್ತೂರು, ಕಸಾಪ ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷೆ ರೇಖಾ ಸುದೇಶ್ ರಾವ್, ಕನ್ನಡ ಭವನದ ಉಡುಪಿ ಜಿಲ್ಲಾಧ್ಯಕ್ಷೆ ಶೋಭಾ ದಿನೇಶ್ ಉದ್ಯಾವರ; ಕನ್ನಡ ಭವನ ಪ್ರಕಾಶಕಿ ಸಂಧ್ಯಾರಾಣಿ ಟೀಚರ್, ಕಾಸರಗೋಡು ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ದೇವರಾಜ ಆಚಾರ್ಯ ಸೂರಂಬೈಲ್ ಭಾಗವಹಿಸಿದ್ದರು. ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವದ ರೂವಾರಿ ಡಾ. ವಾಮನ್ ರಾವ್ ಬೇಕಲ್ ಪ್ರಾಸ್ತಾವಿಕವಾಗಿ ಮಾತನಾಡಿದರು.  ರೇಖಾ ರೋಶನ್ ಸ್ವಾಗತಿಸಿದರು. ವಸಂತ ಕೆರೆಮನೆ ವಂದಿಸಿದರು. ವಿರಾಜ್ ಅಡೂರು ಕಾರ್ಯಕ್ರಮ ನಿರೂಪಿಸಿದರು.



ಈ ಸಂದರ್ಭದಲ್ಲಿ ಕೆ. ನರಸಿಂಹ ಭಟ್ ಏತಡ್ಕ ಪ್ರಭಾವತಿ ಕೆದಿಲಾಯ ಪುಂಡೂರು, ವಿಜಯರಾಜ ಪುಣಿಂಚಿತ್ತಾಯ ಬೆಳ್ಳೂರು, ಶಶಿಕಲಾ ಟೀಚರ್ ಕುಂಬ್ಳೆ, ಆದ್ಯಂತ್ ಅಡೂರು, ಡಾ. ಸುರೇಶ್ ನೆಗಳಗುಳಿ, ಲಕ್ಷ್ಮಿ ವಿ. ಭಟ್, ಚಿತ್ರಕಲಾ ದೇವರಾಜ ಆಚಾರ್ಯ ಸೂರಂಬೈಲ್, ಕೆ. ಎಸ್. ಮಂಜುನಾಥ ಹರಿಹರಪುರ, ರೇಖಾ ಸುದೇಶ್ ರಾವ್, ಶೋಭಾ ದಿನೇಶ್ ಉದ್ಯಾವರ ಇವರಿಗೆ ಕಾಸರಗೋಡು ದಸರಾ ಕವಿ ಸಾಧಕ ಪ್ರಶಸ್ತಿ-2025 ಪ್ರದಾನ ಮಾಡಲಾಯಿತು.


ಭಕ್ತಿಪ್ರಧಾನ ಕವಿಗೋಷ್ಠಿಯಲ್ಲಿ ಶ್ರೀಹರಿ ಭಟ್ ಪೆಲ್ತಾಜೆ, ಶ್ವೇತಾ ಡಿ. ಬಂಟ್ವಾಳ, ಕುಶಿ ಬಡಗಬೆಳ್ಳೂರು ಬಂಟ್ವಾಳ, ಸವಿತಾ ಕರ್ಕೇರ ಕಾವೂರು, ಮಲ್ಲಿಕಾ ಬಿ. ಎಸ್ ರೆಂಜತಮೂಲೆ ಪೆರ್ಲ, ಎಂ. ಎ. ಮುಸ್ತಫಾ ಬೆಳ್ಳಾರೆ, ಗಿರೀಶ್ ಪೆರಿಯಡ್ಕ ಉಪ್ಪಿನಂಗಡಿ, ಸುಜಿತ್ ಕುಮಾರ ಬೇಕೂರು, ರಾಧಾಕೃಷ್ಣ ಭಟ್ ಕುರುಮುಜ್ಜಿ, ಜ್ಯೋತ್ಸ್ನಾ ಕಡಂದೇಲು, ನಿವೇದಿತಾ ಪ್ರಶಾಂತ್ ಸಹಿತ 25ಕ್ಕೂ ಮಿಕ್ಕಿದ ಕವಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪತ್ರಕರ್ತ ಪುರುಷೋತ್ತಮ ಭಟ್ ಪುದುಕೋಳಿ, ಗೀತಾ ಎಂ. ಭಟ್ ಮೊದಲಾದವರು ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top