ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಇಪ್ಕೋ ನವದೆಹಲಿಯ ನಿರ್ದೇಶಕ,ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು ಇದರ ನಿರ್ದೇಶಕ, ಮೆನೇಜಿಂಗ್ ಟ್ರಸ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ)ನ ಮ್ಯಾನೇಜಿಂಗ್ ಟ್ರಸ್ಟಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರಿಗೆ ವಿ ಆರ್ ಫ್ರೆಂಡ್ಸ್ ಯುನೈಟೆಡ್ ವತಿಯಿಂದ 'ಮಂಗಳೂರು ರತ್ನ' ಪ್ರಶಸ್ತಿ ನೀಡಿ ಶನಿವಾರ ಎಸ್ ಸಿಡಿಸಿಸಿ ಬ್ಯಾಂಕ್ ಸೌಧದಲ್ಲಿ ಗೌರವಿಸಲಾಯಿತು.
ಈ ಸಂದರ್ಭ ದಲ್ಲಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ಬಲ್ಯೊಟ್ಟು, ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್, ಉದ್ಯಮಿ ಜಯಪ್ರಕಾಶ್ ತುಂಬೆ, ವೀ ಆರ್ ಯುನೈಟೆಡ್ ಸಂಸ್ಥೆಯ ಅಧ್ಯಕ್ಷ ಆಜ್ಫರ್ ರಾಝಕ್, ಉಪಾಧ್ಯಕ್ಷ ಮನೋಜ್ ಕುಮಾರ್, ಕಾರ್ಯದರ್ಶಿ ನಿಶಾನ್ ಭಂಡಾರಿ, ಕೋಶಾಧಿಕಾರಿ ಸುದೇಶ್ ಭಂಡಾರಿ ಇರಾ, ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ, ದೀಪಕ್ ಪಿಲಾರ್, ನಿತಿನ್ ಶೆಟ್ಟಿ, ಸುಜಿತ್ ಭಂಡಾರಿ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


