ಮೂಡುಬಿದಿರೆ: ಭಾಷೆಗಳ ನಡುವಿನ ಸಮನ್ವಯವು ರಾಷ್ಟ್ರದ ಏಕತೆ, ಭದ್ರತೆ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಸಹಕಾರಿ ಎಂದು ಉಜಿರೆಯ ಎಸ್ಡಿಎಂ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥ ಡಾ. ಮಲ್ಲಿಕಾರ್ಜುನ ಎನ್ ನುಡಿದರು. ಅವರು ಆಳ್ವಾಸ್ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಭಾಷಾ ಸಾಮರಸ್ಯವು ದೇಶದ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಬಲ್ಲದು. ಭಾರತೀಯ ಸಂವಿಧಾನದ ಅನುಸಾರ 22 ಭಾಷೆಗಳು ಅಧಿಕೃತ ಮಾನ್ಯತೆಯನ್ನು ಪಡೆದಿವೆ.ಅವುಗಳೆಲ್ಲವು ನಮ್ಮ ಸಂಸ್ಕೃತಿ, ಆಚಾರ, ಸಂಪ್ರದಾಯಗಳನ್ನು ಪ್ರತಿನಿಧಿಸುವ ಜೊತೆಗೆ ಭಾರತದ ಸಾಂಸ್ಕೃತಿಕ ವೈವಿಧ್ಯತೆಯನ್ನು ಜಗತ್ತಿಗೆ ಸಾರಿ ಹೇಳುತ್ತಿವೆ. ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ತಮ್ಮ ಮಾತೃ ಭಾಷೆಯಲ್ಲಿ ಕಲಿಯಲು ಅವಕಾಶ ನೀಡಬೇಕು. ಮಾತೃ ಭಾಷೆಯ ಶಿಕ್ಷಣ ಮಕ್ಕಳ ಸೃಜನಶೀಲತೆ, ಚಿಂತನಾ ಶಕ್ತಿ ಮತ್ತು ಭಾವನಾತ್ಮಕ ಬೆಳವಣಿಗೆಗೆ ಸಹಕಾರಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಎಲ್ಲಾ ಭಾಷೆಗಳಿಗೂ ಸಮಾನ ಗೌರವ ದೊರೆಯಬೇಕು. ಯಾವುದೇ ಭಾಷೆ ಶ್ರೇಷ್ಠ ಅಥವಾ ನಿಕೃಷ್ಟ ಎಂಬ ಭಾವನೆ ಸಲ್ಲದು. ಭಾರತದ ಜನಸಂಖ್ಯೆಯ ಸುಮಾರು 46 ಪ್ರತಿಶತ ಜನರು ಹಿಂದಿ ಮಾತನಾಡುತ್ತಿರುವುದು ದೇಶದ ಏಕತೆಗೆ ದೊಡ್ಡ ಬಲವಾಗಿದೆ ಎಂದರು.
ವಿದ್ಯಾರ್ಥಿಗಳು ಹಿಂದಿ ಭಾಷೆಯ ಮಹತ್ವ ಕುರಿತಾಗಿ ಪ್ರಬಂಧ, ಕವನ ವಾಚನ ಮತ್ತು ಹಿಂದಿ ಗೀತೆಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿಭಾಗದ ಮುಖ್ಯಸ್ಥ ಡಾ ದತ್ತಾತ್ರೇಯ ಹೆಗಡೆ ಇದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಮೆಹರ್ ನಿರೂಪಿಸಿ, ಪೂರ್ವಿ ರೈ ಅತಿಥಿಗಳನ್ನು ಪರಿಚಯಿಸಿ, ರಕ್ಷಿತಾ ಪೂಜಾರಿ ಸ್ವಾಗತಿಸಿ, ಜುಹಾ ವಂದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
