ಅ.05: ಶ್ರೀ ವ್ಯಾಸರಾಜ ಮಠದಲ್ಲಿ ಸಾಧಕೋತ್ತಮರಿಗೆ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ

Upayuktha
0

ಆಯೋಜನೆ: ವಿಶ್ವ ಮಧ್ವಮತ ವೆಲ್‍ಫೇರ್ ಅಸೋಸಿಯೇಷನ್ 



ಬೆಂಗಳೂರು: ಶ್ರೀಮಧ್ವ ಜಯಂತಿ ಅಂಗವಾಗಿ ವ್ಯಾಸ-ದಾಸ ಸಾಹಿತ್ಯದಲ್ಲಿ ಅಪ್ರತಿಮ ಸೇವೆ ಸಲ್ಲಿಸುತ್ತಿರುವ ವಿದ್ವನ್ಮಣಿಗಳಿಗೆ ಬೆಂಗಳೂರು ಗಾಂಧಿ ಬಜಾರ್ ಶ್ರೀ ವ್ಯಾಸರಾಜ ಮಠದಲ್ಲಿ 5ನೇ ವರ್ಷದ ‘ಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.05ರಂದು ಸಂಜೆ 6  ಗಂಟೆಗೆ  ವಿಶ್ವ ಮಧ್ವಮತ ವೆಲ್‍ಫೇರ್ ಅಸೋಸಿಯೇಷನ್ ಆಯೋಜಿಸಿದೆ.


ಕನ್ನಡನಾಡಿನ ಹೆಮ್ಮೆಯ ಆಚಾರ್ಯರಾದ ವಿಶ್ವಗುರು ಮಧ್ವಾಚಾರ್ಯರ ಸಂದೇಶದ ಪ್ರಸಾರ ತನ್ಮೂಲಕ ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕೈಂಕರ್ಯ ಮಾಡುತ್ತಿರುವ ವಿಎಂಡ್ಲ್ಯೂಎ ವತಿಯಿಂದ  ಈ ಸಮಾರಂಭ ಏರ್ಪಡಿಸಿದ್ದು, ಅಂದು ಸಂಜೆ 4.00 ರಿಂದ5.30ರವರೆಗೆ ಬಸವನಗುಡಿ ನವಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ಗಾಂಧಿ ಬಜಾರ್ ಸೋಸಲೇ ವ್ಯಾಸರಾಜ ಮಠದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ.


ಸಭಾ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಕೋಲಾರ ಜಿಲ್ಲೆ ತಂಬಿಹಳ್ಳಿ ಶ್ರೀ ಮಾಧವ ತೀರ್ಥ ಮಠದ ಶ್ರೀ ವಿದ್ಯಾವಲ್ಲಭ ಮಾಧವ ತೀರ್ಥ ಶ್ರೀಪಾದರು ವಹಿಸುವರು. ಬೆಂಗಳೂರು ದಕ್ಷಿಣ ಸಂಸದ ಎಲ್.ಎಸ್. ತೇಜಸ್ವಿ ಸೂರ್ಯ , ವಿಜಯಪುರ ಮಾನ್ಯ ಶಾಸಕ ಮತ್ತು ಮಾಜಿ ಕೇಂದ್ರ ಸಚಿವ  ಬಸವನಗೌಡ ಪಾಟೀಲ್ (ಯತ್ನಾಳ್) , ಬಸವನಗುಡಿ ಶಾಸಕ ಎಲ್.ಎ. ರವಿಸುಬ್ರಮಣ್ಯ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್‍ ರಘುನಾಥ್,  ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಮುಖ್ಯಅತಿಥಿಗಳಾಗಿ ಭಾಗವಹಿಸುವರು.


ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷ ಡಾ.ಜಿ.ನಾಗೇಂದ್ರ ಅಧ್ಯಕ್ಷತೆ ವಹಿಸುವ ಸಮಾರಂಭದಲ್ಲಿ ಧರ್ಮಶಾಸ್ತ್ರ ಅಧ್ಯಯನಕ್ಕಾಗಿ ಮಂತ್ರಾಲಯದ ರಾಮಾಚಾರ್ಯ, ಅನೇಕಲ್‍ನ  ಕೆ.ವಿ. ಲಕ್ಷ್ಮೀನಾರಾಯಣಾಚಾರ್ಯ , ಲೆಕ್ಕ ಪರಿಶೋಧಕ ಸಿಎ ಸಿ ಆರ್ ಮುರಳಿ , ವಿದ್ವಾನ್ ಶ್ರೀನಿಧಿ ಆಚಾರ್ಯ ಉತ್ತನೂರು ಮತ್ತು ವಿದ್ವಾನ್ ಸುಘೋಷಾಚಾರ್ಯ ರವರುಗಳಿಗೆ ‘ಶ್ರೀಮಧ್ವ ವಿಜಯ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ವಿಎಂಡ್ಲ್ಯೂಎ ಸಂಸ್ಥಾಪಕ ಅಧ್ಯಕ್ಷ ಬಿ.ಕೆ. ವೆಂಕೋಬ ರಾವ್‍ ಮತ್ತು ರಾಜ್ಯಾಧ್ಯಕ್ಷ ಶ್ರೀನಿವಾಸ ಜೋಷಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ, ವಿವರಗಳಿಗೆ : 91138 53325



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top