ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ: ವಿವೇಕಾನಂದ PU ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Upayuktha
0




ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು, ಕಟೀಲು ಇದರ ಸಹಯೋಗದಲ್ಲಿ ನಡೆದ   ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. 


ತಂಡದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಭವಿಷ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ಮನ್ವಿತ್ ಬಿ.ಎಲ್, ವನೀಶ್, ಮಿಥುನ್ ಶೆಟ್ಟಿ, ಪ್ರೇಕ್ಷಿತ್ ಹಾಗೂ ಪ್ರಥಮ ಪಿಯುಸಿಯ  ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಘನಶ್ಯಾಮ, ಲಿಖಿತ್, ಕೀರ್ತನ್, ಸಾತ್ವಿಕ್, ಆಯುಷ್ ಭಾಗವಹಿಸಿದ್ದು , ದ್ವಿತೀಯ ವಿಜ್ಞಾನ  ವಿಭಾಗದ ಭವಿಷ್ ಉತ್ತಮ ರಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳಾದ ಭವಿಷ್, ಗೌತಮ್ ಹಾಗೂ ವನೀಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ, ಪವನ್ ಕುಮಾರ್ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top