ಉಡುಪಿ: ಮಾತೃಭೂಮಿ ಯುವಕರ ಸಂಘ (ರಿ) ಬೆಂಗಳೂರು ಇದರ 30ನೇ ವರ್ಷದ ಸಂದರ್ಭದಲ್ಲಿ ನಡೆದ ಮಾತೃಭೂಮಿ ಸಂಭ್ರಮ -2025 ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಂ. ಕಾರ್ಯದರ್ಶಿ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ರವರಿಗೆ ಮಾತೃಭೂಮಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರು ಗ್ರಾಮಾಂತರ ನೆಲಮಂಗಲ ಹರ್ಷ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ರವರು ಪ್ರಶಸ್ತಿ ಪ್ರದಾನ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌದರಿ, ನೆಲಮಂಗಲ ಶಾಸಕ ಎಸ್ ಶ್ರೀನಿವಾಸ್, ಯುವಜನ ಇಲಾಖೆಯ ಉಪ ನಿರ್ದೇಶಕಿ ಡಾ. ಮಂಜುಳಾ, ಮಾತೃಭೂಮಿ ಯುವಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಡಾ. ಎಸ್ ಬಾಲಾಜಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಶ್ರೀ ಸಿದ್ದರಾಜು ಮಹಾಸ್ವಾಮಿಜಿ ಖ್ಯಾತ ಜನಪದ ಕಲಾವಿದ ಗುರುರಾಜ್ ಹೊಸಕೋಟೆ, ಶಿವಕುಮಾರ್ ಮುಂತಾದವರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


