ಎಸ್‌.ಎಲ್ ಭೈರಪ್ಪ ನಿಧನ: ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Upayuktha
0



2025 ರ ಜುಲೈ 26 ರಂದು ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕನ್ನಡ ನಾಡಿನ ಖ್ಯಾತ ಎಸ್. ಎಲ್. ಭೈರಪ್ಪನವರ ಜೊತೆ ಹೆಗ್ಗಡೆಯವರು.


ಧರ್ಮಸ್ಥಳ: ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪನವರ ನಿಧನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಈ ಕುರಿತು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಭೈರಪ್ಪನವರೊಂದಿಗಿನ ಒಡನಾಟದ ನೆನಪುಗಳನ್ನು ಸ್ಮರಿಸಿಕೊಂಡಿದ್ದಾರೆ.


2025 ರ ಜುಲೈ 26 ರಂದು ಶನಿವಾರ ಬೆಂಗಳೂರಿನಲ್ಲಿ ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಅವರ ನೂರನೆ ಕೃತಿ ಬಿಡುಗಡೆ ಸಮಾರಂಭದಲ್ಲಿ ನಾವು ಜೊತೆಯಾಗಿ ಭಾಗವಹಿಸಿದ್ದು ಆತ್ಮೀಯವಾಗಿ ಮಾತನಾಡಿದ್ದೆವು. ಅದು ನಮ್ಮ ಕೊನೆಯ ಭೇಟಿಯಾಗಿತ್ತು. ನೇರ ನಡೆ-ನುಡಿಯ ಸರಳ ವ್ಯಕ್ತಿತ್ವವನ್ನು ಹೊಂದಿದ್ದ ಅವರು ಕನ್ನಡ ನಾಡು-ನುಡಿ, ಸಂಸ್ಕೃತಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಅನೇಕ ಕಾದಂಬರಿಗಳು ಹಾಗೂ ಸಾಹಿತ್ಯ ಕೃತಿಗಳು ಹಲವು ಬಾರಿ ಮರು ಮುದ್ರಣಗೊಂಡಿರುವುದಲ್ಲದೆ ಇತರ ಭಾಷೆಗಳಿಗೂ ಭಾಷಾಂತರಗೊಂಡಿವೆ. ಅವರ ಹೆಚ್ಚಿನ ಕೃತಿಗಳನ್ನು ನಾನು ಆಸಕ್ತಿಯಿಂದ ಓದಿದ್ದೇನೆ ಎಂದು ಹೆಗ್ಗಡೆಯವರು ನೆನಪಿಸಿಕೊಂಡಿದ್ದಾರೆ.


1981 ರ ನವೆಂಬರ್ 26 ರಂದು ಗುರುವಾರ ಲಕ್ಷದೀಪೋತ್ಸವ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಅವರು ಅಧ್ಯಕ್ಷತೆ ವಹಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಎಂದು ಹೆಗ್ಗಡೆಯವರು ತಿಳಿಸಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top