ಪುತ್ತೂರು: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕೆನರಾ ಪದವಿಪೂರ್ವ ಕಾಲೇಜು, ಇದರ ಸಹಯೋಗದೊಂದಿಗೆ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣ ಮಂಗಳೂರು ಇಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪುಲಕಿತ, ದ್ವಿತೀಯ ವಾಣಿಜ್ಯ ವಿಭಾಗದ ನೇಹಶ್ರೀ ಎ. ಎಸ್ , ಪ್ರಥಮ ವಿಜ್ಞಾನ ವಿಭಾಗದ ಸಮನ್ವಿತ ಭಾಗವಹಿಸಿದ್ದರು.ಇದರಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ನೇಹಶ್ರೀ ಎ .ಎಸ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್ ವಿ.ಎಸ್, ಡಾ. ಜ್ಯೋತಿ ಕುಮಾರಿ, ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿ ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ