ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ – ಇನ್ಸ್ಟಿಟ್ಯೂಟ್ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ ಪುನಶ್ಚೇತನ ಕಾರ್ಯಕ್ರಮ ಬುಧವಾರ ಮುಕ್ಕ ಕ್ಯಾಂಪಸ್ನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ದೇಶ ನೂತನ ಪದವಿ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾನಿಲಯದ ದೃಷ್ಟಿಕೋನ, ಶೈಕ್ಷಣಿಕ ಪರಿಸರ, ಕ್ಷೇತ್ರದಲ್ಲಿರುವ ಅವಕಾಶಗಳ ಪರಿಚಯವನ್ನು ನೀಡುವುದು.
ಈ ಕಾರ್ಯಕ್ರಮವನ್ನು ಶ್ರೀನಿವಾಸ ವಿಶ್ವವಿದ್ಯಾಲಯ ಗೌರವಾನ್ವಿತ ಕುಲಾಧಿಪತಿ ಮತ್ತು ಎ. ಶಾಮರಾವ್ ಫೌಂಡೇಶನ್ ಅಧ್ಯಕ್ಷರಾದ ಡಾ. ಸಿಎ. ಎ. ರಾಘವೇಂದ್ರ ರಾವ್ ಅವರ ಮಾರ್ಗದರ್ಶನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ವಹಿಸಿದ್ದರು. ತಮ್ಮ ಪ್ರಧಾನ ಭಾಷಣದಲ್ಲಿ ಅವರು, ಬದಲಾವಣೆ ಜೀವನದ ಅಸ್ತಿತ್ವ. ಇಂದಿನ ಕಾಲದಲ್ಲಿ ತಂತ್ರಜ್ಞಾನವೇ ಆ ಬದಲಾವಣೆಯನ್ನು ವೇಗವಾಗಿ ಮುನ್ನಡೆಸುತ್ತಿದೆ. ನಿರಂತರವಾದ ಸಂಶೋಧನೆ ಮತ್ತು ಕೃತಕ ಬುದ್ಧಿಮತ್ತೆಯ ಪ್ರಗತಿಯಿಂದ ಪರಂಪರಗತಾ ಎಂಜಿನಿಯರಿಂಗ್ ತಾಂತ್ರಿಕ ನವೀನತೆಯಾಗಿ ರೂಪಾಂತರಗೊಳ್ಳುತ್ತಿದೆ. ಎಂಜಿನಿಯರ್ಗಳಾಗಿ ನಾವು ಈ ಬದಲಾವಣೆಯನ್ನು ಅಪ್ಪಿಕೊಳ್ಳಿ, ಸಮಾಜ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣವಾಗಿ ಕೊಡುಗೆ ನೀಡೋಣ.
ಶ್ರೀನಿವಾಸ ವಿಶ್ವವಿದ್ಯಾಲಯ ಮೌಲ್ಯಮಾಪನ ರಿಜಿಸ್ಟ್ರಾರ್ ಡಾ. ಶ್ರೀನಿವಾಸ ಮಯ್ಯ ಡಿ. ಮಾತನಾಡಿ, ಖಾಸಗಿ ವಿಶ್ವವಿದ್ಯಾಲಯವಾಗಿರುವ ನಾವು, ಪ್ರತೀ ವರ್ಷವೂ ನಮ್ಮ ಪಠ್ಯಕ್ರಮವನ್ನು ನವೀಕರಿಸುತ್ತೇವೆ, ಇದರಿಂದ ವಿದ್ಯಾರ್ಥಿಗಳು ಇತ್ತೀಚಿನ ತಂತ್ರಜ್ಞಾನಕ್ಕೆ ಹೊಂದಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರು ಕೈಗಾರಿಕೆಗೆ ಕಾಲಿಟ್ಟಾಗಲೇ ಅಗತ್ಯವಾದ ಜ್ಞಾನ ಮತ್ತು ಕೌಶಲ್ಯಗಳನ್ನು ಹೊಂದಿರುತ್ತಾರೆ ಎಂದರು.
ಶ್ರೀನಿವಾಸ ವಿಶ್ವವಿದ್ಯಾಲಯ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಅವರು ವಿಶ್ವವಿದ್ಯಾನಿಲಯದ ಮೂಲಸೌಕರ್ಯಗಳು, ಶೈಕ್ಷಣಿಕ ಗುಣಮಟ್ಟ ಮತ್ತು ವಿಭಿನ್ನ ಕೋರ್ಸ್ಗಳ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು.
ಎಸ್ಯುಐಇಟಿ ಡೀನ್ ಡಾ. ರಾಮಕೃಷ್ಣ ಎನ್. ಹೆಗ್ಡೆ ಸ್ವಾಗತಿಸಿ, ಡಾ. ಆಶಾ ಸರಸ್ವತಿ ಬಿ. ವಂದಿಸಿದರು. ಪ್ರೊ. ರೋಹನ್ ಫರ್ನಾಂಡಿಸ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ