ಬದುಕಿನ ಬದಲಾವಣೆಗೆ ಅವಕಾಶ ಮಾಡಿಕೊಡಬಲ್ಲ ಶಕ್ತಿ ಈ ಭಜನಾ ಕಮ್ಮಟಕ್ಕಿದೆ. ಹಾಗಾಗಿ ಈ ಮಹೋತ್ಸವ ಸಭಾಭವನವು ಇಂದು ಅಧಿಕೃತ ಶಾಲೆಯಾಗಿ ಮಾರ್ಪಾಡುಗೊಂಡು ಭಜಕರಿಗೆ ಬದುಕಿನ ಪಾಠವನ್ನು ಕಲಿಸುತ್ತಿದೆ. ಸಂಸ್ಕೃತಿ ಸಂಸ್ಕಾರದ ಬಿತ್ತನೆಗೆ ಇದೊಂದು ಉತ್ತಮ ಬುನಾದಿ ಎಂದು ಹೇಳಿದರು.
ಆರೋಗ್ಯಕರ ದೇಹವೆಂಬುದು ಆತ್ಮದ ಅರಮನೆ ಇದ್ದಂತೆ ಅದನ್ನು ಸಮತೋಲನದಲ್ಲಿ ಇರಿಸಲು ದೈಹಿಕ ಮತ್ತು ಮಾನಸಿಕ ಚಟುವಟಿಕೆಗಳನ್ನು ರಚನಾತ್ಮಕವಾಗಿರಿಸಬೇಕು. ನಮ್ಮ ಆಹಾರದ ಗುಣಗಳು ಬದಲಾದಂತೆ ವರ್ತನೆಗಳು ಅದರ ಮೇಲೆ ಅವಲಂಬಿತಗೊಂಡಿರುತ್ತವೆ, ಆಹಾರದಿಂದ ನಮ್ಮ ಗುಣ ನಿರ್ಧರಿತವಾಗುತ್ತದೆ. ಪ್ರಾಣಿ ಪಕ್ಷಿಗಳು ತಮಗೆ ಬೇಕಾದ ಆಹಾರವನ್ನಲ್ಲದೆ ಬೇರೆ ಯಾವುದನ್ನೂ ಅವು ಸೇವಿಸುವುದಿಲ್ಲ. ಅಂತೆಯೇ ನಮ್ಮ ದೇಹಕ್ಕೆ ಪೂರಕವಾದ ಆಹಾರವನ್ನು ಮಾತ್ರ ನಾವು ಸೇವಿಸಬೇಕು, ಅದಲ್ಲದೇ ಯಾವುದೇ ರೀತಿಯ ವ್ಯಸನಗಳಿಗೆ ಬಲಿಯಾಗಿ ಮಾನವ ಜೀವನದ ಮಹತ್ವವನ್ನು ಕಳೆದುಕೊಳ್ಳಬಾರದೆಂದು ಅಭಿಪ್ರಾಯಪಟ್ಟರು.
ನಮ್ಮನ್ನು ಡ್ರಿಂಕ್ಸ್, ಡೈನ್, ಡೈ, ಮತ್ತು ಡ್ಯಾನ್ಸ್ ಎಂಬ 4ಡಿ ಗಳು ಅತಿಯಾಗಿ ಆಕರ್ಷಿಸುತ್ತಿದೆ. ಅದರಿಂದ ನಾವಿಂದು ತಿಂದು, ಕುಡಿದು, ಸಾಯುತ್ತಿದ್ದೇವೆ, ಅಲ್ಲದೇ ಬದುಕನ್ನು ಬದುಕುವಲ್ಲಿ ಸೋಲುತ್ತಿದ್ದೇವೆ. ಸರ್ಪಗಳ ಹೆಡೆಯಲ್ಲಿ ವಿಷವಿದ್ದರೆ, ವ್ಯಸನಿಗಳ ದೇಹವೇ ವಿಷಪೂರಿತಗೊಂಡು ತಮ್ಮ ದೇಹವನ್ನು ತಾವೇ ಕ್ಷೀಣಿಸಿಕೊಳ್ಳುವಂತೆ ಮಾಡುತ್ತಿದೆ.
ಹಾಗಾಗಿ ಇಂದು ನಮ್ಮ ದುರಾದೃಷ್ಟಕ್ಕೆ ಭಾರತ ವಿಶ್ವದಲ್ಲಿ ಮದ್ಯಪಾನ ಸೇವನೆಯಲ್ಲಿ ಪ್ರಥಮ ಸ್ಥಾನ, ಧೂಮಪಾನ ವ್ಯಸನದಲ್ಲಿ ಎರಡನೇ ಸ್ಥಾನ, ಮತ್ತು ಮಾದಕ ವಸ್ತುಗಳ ಸೇವನೆ ಮತ್ತು ಮಾರಾಟದಲ್ಲಿ ತೃತೀಯ ಸ್ಥಾನವನ್ನು ಪಡೆದಿದೆ.ಇದರ ಬದಲಾವಣೆ ಮಾಡಲು ಶ್ರೀ ಕ್ಷೇತ್ರ ಹಲವು ಪುಣ್ಯ ಕಾರ್ಯಗಳನ್ನು ಮಾಡುತ್ತಾ ಯಶಸ್ಸನ್ನು ಕಾಣುತ್ತಿದೆ. ಅಲ್ಲದೆ ಹಲವರ ಬದುಕನ್ನು ಕಟ್ಟಿಕೊಟ್ಟು ಭೂಲೋಕದ ಸ್ವರ್ಗ ಎಂದೆನಿಸಿಕೊಂಡಿದೆ ಎಂದು ನುಡಿದರು.
ಶರೀರವೆಂಬುದು ಕಾರ್ಖಾನೆ ಇದ್ದಂತೆ ನಾವೇನು ಕ್ರಿಯೆಗಳನ್ನು ಸೂಚಿಸುತ್ತೇವೋ ಅದು ಅದಕ್ಕೆ ಸರಿಯಾದ ಪ್ರತಿಕ್ರಿಯೆ ನೀಡುತ್ತದೆ. ಬದುಕು ಬಂಗಾರವಾಗಲು ಬಣ್ಣ,ಅಂದ - ಚೆಂದ, ಹಣ, ಜಾತಿ ಯಾವುದು ಮುಖ್ಯವಲ್ಲ ಬುದ್ಧಿವಂತಿಕೆಯಿಂದ ಮಾತ್ರ ಸಾಧ್ಯ. ಆ ಬುದ್ಧಿವಂತಿಕೆ ಬಳಸಿ ಬದುಕಿನ ಸವಾಲುಗಳನ್ನು ಎದುರಿಸಿ ಬದುಕಲು ಆಧ್ಯಾತ್ಮಿಕ ಕಾರ್ಯಗಳು ದಾರಿದೀಪವಾಗುತ್ತದೆ ಎಂದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
