ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಉದ್ದಿಮೆ ಭೇಟಿ, ಅಭಿಯಾನದಡಿಯಲ್ಲಿ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ ಹಾಗೂ ಉಜಿರೆಯ ಮಂಜುಶ್ರೀ ಪ್ರಿಂಟಸ್೯ಗೆ ಭೇಟಿ ನೀಡಿದರು.
ಸಿರಿ ಸಂಸ್ಥೆಯ ಮೆನೇಜರ್ ಜೀವನ್ ಶೆಟ್ಟಿಯವರು ಸಂಸ್ಥೆಯ ಉದ್ದೇಶ ಕಾರ್ಯವೈಖರಿ, ಎಲ್ಲಾ ಉತ್ಪನ್ನಗಳ ತಯಾರಿಕೆಯ ವಿವಿಧ ಹಂತಗಳ ಬಗ್ಗೆ ಹಾಗೂ ಉದ್ಯೋಗಿಗಳಿಗೆ ಸಂಸ್ಥೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ವಿವರಿಸಿದರು.
ಮಂಜುಶ್ರೀ ಪ್ರಿಂಟಸ್೯ ಮೆನೇಜರ್ ಸಂಸ್ಥೆಯಲ್ಲಿ ಅಳವಡಿಸಲಾಗಿರುವ ತಂತ್ರಜ್ಞಾನ ಹಾಗೂ ಕೆಲಸ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಪೆಸರ್ ಪ್ರಮೋದ್ ಕುಮಾರ್ ವಿಧ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರು ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಸಹಕಾರ ನೀಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
