ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ "ಭಗವದ್ಗೀತೆ- ಮನಃ ಸ್ವಾಸ್ಥ್ಯದ ಕೈಪಿಡಿ" ಎಂಬ ಭಗವದ್ಗೀತಾ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ಶಾಸ್ತ್ರದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಹಂಸಿನಿ ಭಿಡೆ, ಪ್ರಥಮ ಬಹುಮಾನ ಹಾಗೂ ದ್ವಿತೀಯ ಕಲಾ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ, ನಿಜ ಕುಲಾಲ್ ದ್ವಿತೀಯ ಬಹುಮಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶ್ರೀ ಭಗವದ್ಗೀತಾ ಅಭಿಯಾನ- 2025, ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಹಾಗೂ ಸಂಸ್ಕೃತ ಭಾಷಾ ವಿಭಾಗ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು, ಉಜಿರೆ ಇವರ ಸಂಯುಕ್ತ ಆಶ್ರಯದಲ್ಲಿ ಈ ಸ್ಪರ್ಧೆ ನಡೆದಿತ್ತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

