ಹೊಸದಿಲ್ಲಿ: ಹೊಸದಿಲ್ಲಿಯ ವಸಂತಕುಂಜ್ ನಲ್ಲಿರುವ ಶ್ರೀ ಪೇಜಾವರ ಮಠದ ಶಾಖೆಯಲ್ಲಿ ವಿಜಯದಶಮೀ ಪ್ರಯುಕ್ತ ಲೋಕಕಲ್ಯಾಣಾರ್ಥ ಮತ್ತು ವಿಶೇಷವಾಗಿ ಸಮಸ್ತ ದಿಲ್ಲಿಯ ಜನತೆಯ ಕ್ಷೇಮ ಸಮೃದ್ಧಿಗಾಗಿ ಪ್ರಾರ್ಥಿಸಿ ಚಂಡಿಕಾ ಯಾಗವು ಬುಧವಾರ ವೈಭವದಿಂದ ನೆರವೇರಿತು.
ಮುಖ್ಯಮಂತ್ರಿ ರೇಖಾ ಗುಪ್ತಾ ದಂಪತಿಯ ಹೆಸರು ಜನ್ಮ ನಕ್ಷತ್ರ ರಾಶಿ ಉಲ್ಲೇಖಿಸಿಯೇ ಯಾಗದ ಸಂಕಲ್ಪ ನೆರವೇರಿಸಲಾಯಿತು. ರೇಖಾ ಅವರು ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರಿಂದ ಅನುಗ್ರಹ ಪ್ರಸಾದ ಸ್ವೀಕರಿಸಿ ಬಹಳ ಸಂತಸ ವ್ಯಕ್ತಪಡಿಸಿದರು.
ಶ್ರೀಗಳು ಈ ಯಜ್ಞದಿಂದ ಲೋಕ ಕ್ಷೇಮವಾಗಲಿ, ಸಮಸ್ತ ದಿಲ್ಲಿಯ ಜನತೆಗೆ ಶಾಂತಿ ಸುಭಿಕ್ಷೆ ಸಮೃದ್ಧಿ ದೊರಕಲಿ ಎಂದು ಪ್ರಾರ್ಥಿಸಿ, ದಿಲ್ಲಿಯ ಅಭಿವೃದ್ಧಿಗಾಗಿ ರೇಖಾ ಗುಪ್ತಾ ನೇತೃತ್ವದ ಸರ್ಕಾರ ಕೈಗೊಳ್ಳುತ್ತಿರುವ ಎಲ್ಲ ಕಾರ್ಯಗಳೂ ಯಶಸ್ವಿಯಾಗಲಿ; ವಿಶೇಷವಾಗಿ ಯಮುನಾ ನದಿಯನ್ನು ವಿಷಮುಕ್ತಗೊಳಿಸುವ ಕಾರ್ಯ ಅತ್ಯಂತ ಶ್ಲಾಘನೀಯ. ಈ ಕಾರ್ಯದಲ್ಲಿ ಸರ್ಕಾರದ ಜೊತೆ ಸಮಸ್ತ ದೆಹಲಿ ಜನತೆ ಕೈಜೋಡಿಸಿ ಯಶಸ್ವಿಗೊಳಿಸುವಂತಾಗಬೇಕು ಎಂದು ಹಾರೈಸಿದರು.
ಶ್ರೀಗಳವರು ಉತ್ತರಭಾರತ ತೀರ್ಥ ಕ್ಷೇತ್ರ ಸಂಚಾರದಲ್ಲಿರುವ ಹಿನ್ನೆಲೆಯಲ್ಲಿ ಹೊಸದಿಲ್ಲಿಯ ಮಠದ ಶಾಖೆಯಲ್ಲಿ ಅವರ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಠದ ಪರವಾಗಿ ರೇಖಾ ಅವರನ್ನು ವ್ಯವಸ್ಥಾಪಕರೂ ಮತ್ತು ವೇದವ್ಯಾಸ ಗುರುಕುಲದ ಪ್ರಾಚಾರ್ಯ ಡಾ ವಿಠೋಬಾಚಾರ್ಯರು, ಶ್ರೀಗಳ ಆಪ್ತ ಕೃಷ್ಣಮೂರ್ತಿ ಭಟ್, ಆಡಳಿತ ಮಂಡಳಿಯ ಅರವಿಂದ್, ಸದಸ್ಯರು ಆತ್ಮೀಯವಾಗಿ ಮಂತ್ರ ವಾದ್ಯಘೋಷಗಳೊಂದಿಗೆ ಆತ್ಮೀಯವಾಗಿ ಸ್ವಾಗತಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ