ಮಂಗಳೂರಲ್ಲಿ ವಿಶೇಷ ಮಕ್ಕಳ ಪೋಷಕರು-ಶಿಕ್ಷಕರಿಗೆ ಪ್ರಾಥಮಿಕ ಚಿಕಿತ್ಸೆ, ಜೀವರಕ್ಷಣಾ ತರಬೇತಿ

Upayuktha
0


ಮಂಗಳೂರು: ಶಕ್ತಿನಗರದಲ್ಲಿರುವ ಅರಿವು ವಿಶೇಷ ಮಕ್ಕಳ ತರಬೇತಿ ಕೇಂದ್ರ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಮಂಗಳೂರು ಹಾಗೂ ಲಯನ್ಸ್ ನೇತ್ರಾವತಿ ಸಹಯೋಗದಲ್ಲಿ ವಿಶೇಷ ಮಕ್ಕಳ ಹೆತ್ತವರಿಗೆ ಹಾಗೂ ಶಿಕ್ಷಕರಿಗೆ ಜೀವ ರಕ್ಷಣಾ ತರಬೇತಿ ನಡೆಯಿತು.


ಮಂಗಳೂರಿನ ಐಎಂಎ ಭವನದಲ್ಲಿ ನಡೆದ ಕಾರ್ಯಾಗಾರವನ್ನು ಐಎಂಎ ಅಧ್ಯಕ್ಷೆ ಡಾ. ಜೆಸ್ಸಿ ಮರಿಯಾ ಡಿಸೋಜಾ ಉದ್ಘಾಟಿಸಿ ಮಾತನಾಡಿ, ಈ ತರಬೇತಿ ವಿಶೇಷ ಮಕ್ಕಳ ಪೋಷಕರಲ್ಲಿ ಅರಿವು ಹೆಚ್ಚಿಸಲು ಸಹಾಯಕಾರಿಯಾಗುತ್ತದೆ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಅರವಿಂದ ಕುಡ್ಪಿ ಮಾತನಾಡಿ, ಜೀವ ರಕ್ಷಣಾ ತರಬೇತಿ ಆಪತ್ಕಾಲದಲ್ಲಿ ಜೀವವನ್ನು ಉಳಿಸಲು ಸಹಾಯ ಆಗುತ್ತದೆ ಎಂದರು. ಅರಿವು ವಿಶೇಷ ಮಕ್ಕಳ ಸಂಸ್ಥೆಯ ಸ್ಥಾಪಕ ನಿರ್ದೇಶಕಿ ಪೂರ್ಣಿಮಾ ಭಟ್ ಕಾರ್ಯಕ್ರಮದ ಉದ್ದೇಶ ವಿವರಿಸಿದರು.


ಅರಿವು ಟ್ರಸ್ಟ್ ಅಧ್ಯಕ್ಷ ಡಾ. ಸುಂದರ ಭಟ್ ಮಾತನಾಡಿ, ವಿಶೇಷ ಮಕ್ಕಳ ಹೆತ್ತವರಿಗೆ ಮಾರ್ಗದರ್ಶನ ನೀಡಿ ಮುಖ್ಯವಾಹಿನಿಗೆ ತರುವುದು ಅರಿವು ಸಂಸ್ಥೆಯ ಉದ್ದೇಶ ಎಂದರು. ಲಯನ್ಸ್ ಕ್ಯಾಬಿನೆಟ್ ಖಚಾಂಚಿ ಬಾಲಕೃಷ್ಣ ಹೆಗ್ಡೆ, ಗಾಯತ್ರಿ ಅರವಿಂದ ರಾವ್, ಲಯನ್ಸ್ ನೇತ್ರಾವತಿ ಕ್ಲಬ್ ಅಧ್ಯಕ್ಷೆ ವಿನಯ ರಾವ್, ಡಿಸ್ಟ್ರಿಕ್ಟ್ ಅಪ್‌ಲಿಫ್ಟ್ ಆಫೀಸರ್ ಚಂದ್ರಕಲಾ ರಾವ್ ಅನುಭವ ಹಂಚಿಕೊಂಡರು.


ಅರಿವು ಟ್ರಸ್ಟ್ ಖಜಾಂಚಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ತರಬೇತಿಗೆ ಬೇಕಾದ ಪರಿಕರಗಳನ್ನು ಫಾ. ಮುಲ್ಲರ್ ಸಿಮ್ಯುಲೇಷನ್ ಲ್ಯಾಬ್ ಒದಗಿಸಿ ಸಹಕರಿಸಿದರು. ಜೀವ ರಕ್ಷಣಾ ತರಬೇತಿಯನ್ನು ಡಾ, ಸುಧೀರ್ ಪ್ರಭು ನೇತೃತ್ವದಲ್ಲಿ ಡಾ. ಅರ್ಚನಾ ಭಟ್, ಡಾ. ಡೇನ್ ಚಾಂಡಿ, ಡಾ. ಪ್ರಗದೀಶ್ ರಾಜು ನಡೆಸಿಕೊಟ್ಟರು.


ಅರಿವು ಸಂಸ್ಥೆಯ ಸಿಬ್ಬಂದಿ ನಯನ ಮೇಸ್ತ ಕಾರ್ಯಕ್ರಮ ನಿರೂಪಿಸಿದರು. ತಿಲೋತ್ತಮ ಸ್ವಾಗತಿಸಿದರು, ಸಹನಾ ವಂದನಾರ್ಪಣೆ ಮಾಡಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top