
ಕಲಬುರಗಿ: ಕೇಂದ್ರ ಸರ್ಕಾರವು ಇತ್ತೀಚೆಗೆ ಜಾರಿ ಮಾಡಿದ ಜಿಎಸ್ಟಿ (ಸರಕು ಸೇವಾ ತೆರಿಗೆ) ಸುಧಾರಣಾ ಕ್ರಮಗಳ ಕುರಿತಾಗಿ ದೂರದರ್ಶನ ಚಂದನದಲ್ಲಿ ಶನಿವಾರ ಅಕ್ಟೋಬರ್ 11ರಂದು ಮಧ್ಯಾಹ್ನ 2:30ಕ್ಕೆ ವಿಶೇಷ ಸಂವಾದ ಕಾರ್ಯಕ್ರಮ ಪ್ರಸಾರವಾಗಲಿದೆ.
ಕಲಬುರಗಿ ದೂರದರ್ಶನ ಕೇಂದ್ರದಲ್ಲಿ ನಿರ್ಮಾಣಗೊಂಡ ಈ ಕಾರ್ಯಕ್ರಮದಲ್ಲಿ ಜಿಎಸ್ಟಿ ಕೇಂದ್ರ ಇಲಾಖೆಯ ಅಧಿಕ್ಷಕರಾದ ರಮೇಶ್ ತಪಶಿ ಹಾಗೂ ಲೆಕ್ಕಪರಿಶೋಧಕರಾದ ಸಿ ಎ ಮಲ್ಲಿಕಾರ್ಜುನ ಮಹಾಂತಗೋಳ್ ಭಾಗವಹಿಸಲಿದ್ದಾರೆ ಈ ಸಂದರ್ಶನವನ್ನು ಡಾ ಸದಾನಂದ ಪೆರ್ಲ ನಡೆಸಿಕೊಡಲಿದ್ದಾರೆ. ಕೇಂದ್ರ ಸರ್ಕಾರದ ಜಿ ಎಸ್ ಟಿ ಸರಳಿಕರಣದ ಕುರಿತಾಗಿ ಸಮಗ್ರ ಮಾಹಿತಿ ನೀಡುವ ಈ ಕಾರ್ಯಕ್ರಮವನ್ನು ಪ್ರಸಾರ ನಿರ್ವಾಹಕರಾದ ಸಂಗಮೇಶ್ ಮಾರ್ಗದರ್ಶನದಲ್ಲಿ ಕಲಬುರಗಿ ದೂರದರ್ಶನ ಕೇಂದ್ರದಲ್ಲಿ ಸಿದ್ಧಪಡಿಸಲಾಗಿದೆ ಎಂದು ಕಾರ್ಯಕ್ರಮ ಮುಖ್ಯಸ್ಥರಾದ ಸಿದ್ದಣ್ಣ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ