ಗೋವಿಂದ ದಾಸ ಕಾಲೇಜಿನಲ್ಲಿ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮ

Chandrashekhara Kulamarva
0



ಸುರತ್ಕಲ್:  ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯುಕ್ತ ಆಶ್ರಯದಲ್ಲಿ ನಡೆಯುವ ಪುಸ್ತಕ ಪ್ರೀತಿ ಪರಿಚಯ ಸರಣಿ ಕಾರ್ಯಕ್ರಮದಲ್ಲಿ ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ರಮ್ಯ ಜಿ  ಎ.ಆರ್. ಮಣಿಕಾಂತ ರವರು ಬರೆದ ಮತ್ತೆ ಹಾಡಿತು ಕೋಗಿಲೆ ಎಂಬ ಪುಸ್ತಕವನ್ನು ಪರಿಚಯಿಸಿದರು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ್  ಆಚಾರ್ಯ, ಗ್ರಂಥಪಾಲಕರಾದ ಡಾ. ಸುಜಾತಾ. ಬಿ ಹಾಗೂ ಉಪನ್ಯಾಸಕ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿನಿ ವಿಜಯಲಕ್ಷ್ಮಿ ಬಿ. ನ್ಯಾಕ್ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರೀಶ ಆಚಾರ್ಯ ಪಿ, ಇವರು ರಮ್ಯ ಜಿ. ಯವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.



إرسال تعليق

0 تعليقات
إرسال تعليق (0)
To Top